ಚಾಮರಾಜನಗರ

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ: ವಿಡಿಯೋ ವೈರಲ್‌

ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್ ಆಗಿದೆ.

ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ ಈಡಾಗಿತ್ತು. ಇದನ್ನು ಬಿಡಿಸಿಕೊಳ್ಳಲು ಮಾರ್ಚ್ ೨೭ರಂದು ಕಾರಿನ ಮಾಲೀಕ ಮನೋಹರ್ ಗ್ರಾಮಾಂತರ ಪೊಲೀಸ್ ಠಾಣೆಗೆ ಹೋಗಿದ್ದರು.

ಈ ವೇಳೆ ಪೊಲೀಸ್ ಪೇದೆ ವಿಜಯಕುವಾರ್ ಕಾರು ಬಿಡುಗಡೆಗೆ ಮೊದಲು ೧೦ ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಚೌಕಾಸಿ ನಡೆದ ನಂತರ ೬ ಸಾವಿರ ರೂ. ಪಡೆದು ಕಾರು ಬಿಡುಗಡೆ ಮಾಡಿದ್ದರು.

ಸಬ್ ಇನ್‌ಸ್ಪೆಕ್ಟರ್‌ಗೆ ಇದರಲ್ಲಿ ಪಾಲು ನೀಡಬೇಕು. ಕಡಿಮೆ ನೀಡಿದರೆ ಅವರು ಒಪ್ಪಲ್ಲ. ಅವರು ಹೇಳಿದ್ದನ್ನು ನಾನು ನಿಮಗೆ ಹೇಳಿದ್ದೇನೆ ಎನ್ನುವುದು ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. ನಂತರ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸಂಬಂಧ ಮನೋಹರ್ ಪೊಲೀಸ್ ಕಾನ್‌ಸ್ಟೇಬಲ್ ವಿಜಯಕುವಾರ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರಿಗೆ ದೂರು ನೀಡಿ, ಹಣ ವಸೂಲಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

ಆನೆಧಾಮ ಕಾಮಗಾರಿ ಶೀಘ್ರ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಹಾಸನ ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ…

4 hours ago

ತಾಲೂಕಿನ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಬದ್ಧ : ಶಾಸಕ ಉದಯ್‌

ಕೆ.ಎಂ.ದೊಡ್ಡಿ : ತಾಲೂಕಿನ ಕೆರೆಗಳ ಸಮಗ್ರ ಅಭಿವೃದ್ಧಿ ಮಾಡಿ, ನೀರು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ…

4 hours ago

ಮಂಡ್ಯ | ಜಲ್-ಜೀವನ್‌ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ಆರೋಪ

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ…

4 hours ago

ಹನೂರು | ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದ ಸಿಎಂ

ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ…

5 hours ago

ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಈಗ ನೀಟ್ ಕಡ್ಡಾಯ: ಡಾ. ಶರಣ ಪ್ರಕಾಶ ಪಾಟೀಲ

ಬೆಂಗಳೂರು : ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಪ್ರವೇಶವು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ…

6 hours ago

ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ…

7 hours ago