ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ ಈಡಾಗಿತ್ತು. ಇದನ್ನು ಬಿಡಿಸಿಕೊಳ್ಳಲು ಮಾರ್ಚ್ ೨೭ರಂದು ಕಾರಿನ ಮಾಲೀಕ ಮನೋಹರ್ ಗ್ರಾಮಾಂತರ ಪೊಲೀಸ್ ಠಾಣೆಗೆ ಹೋಗಿದ್ದರು.
ಈ ವೇಳೆ ಪೊಲೀಸ್ ಪೇದೆ ವಿಜಯಕುವಾರ್ ಕಾರು ಬಿಡುಗಡೆಗೆ ಮೊದಲು ೧೦ ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಚೌಕಾಸಿ ನಡೆದ ನಂತರ ೬ ಸಾವಿರ ರೂ. ಪಡೆದು ಕಾರು ಬಿಡುಗಡೆ ಮಾಡಿದ್ದರು.
ಸಬ್ ಇನ್ಸ್ಪೆಕ್ಟರ್ಗೆ ಇದರಲ್ಲಿ ಪಾಲು ನೀಡಬೇಕು. ಕಡಿಮೆ ನೀಡಿದರೆ ಅವರು ಒಪ್ಪಲ್ಲ. ಅವರು ಹೇಳಿದ್ದನ್ನು ನಾನು ನಿಮಗೆ ಹೇಳಿದ್ದೇನೆ ಎನ್ನುವುದು ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. ನಂತರ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸಂಬಂಧ ಮನೋಹರ್ ಪೊಲೀಸ್ ಕಾನ್ಸ್ಟೇಬಲ್ ವಿಜಯಕುವಾರ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರಿಗೆ ದೂರು ನೀಡಿ, ಹಣ ವಸೂಲಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…