ಚಾಮರಾಜನಗರ

ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ

ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು.

ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ ಈಗಾಗಲೇ ಒಂದು ಕೋಟಿ ಮಂಜೂರಾಗಿದ್ದು, ಇನ್ನು ನಾಲ್ಕು ಕೋಟಿ ಅನುದಾನ ಬೇಕೆಂದು ಅಧಿಕಾರಿಗಳು ವರದಿ ನೀಡಿದ್ದಾರೆ ಈ ಸಂಬಂಧ ಅನುಮೋದನೆಗಾಗಿ ಹಣಕಾಸು ಇಲಾಖೆಗೆ ವರದಿ ಸಲ್ಲಿಸಲಾಗಿದೆ.ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾದ ನಂತರ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮರು ಪ್ರಶ್ನೆ ಸಲ್ಲಿಸಿದ ಶಾಸಕ ಆರ್ ನರೇಂದ್ರ ವಡಕೆ ಹಳ್ಳ ಗ್ರಾಮದಿಂದ ರಾಮಾಪುರದವರಿಗೆ 72 ಕಿ.ಮೀ ರಸ್ತೆ ಈ ಹಿಂದೆ ಎಂಡಿಆರ್ ರಸ್ತೆಯಾಗಿದ್ದು ಇದೀಗ ಮೇಲ್ದರ್ಜೆಗೇರಿದೆ. ಈ ವ್ಯಾಪ್ತಿಯಲ್ಲಿ ನಾಲ್ಕು ಗ್ರಾಮ ಪಂಚಾಯಿತಿ ಜನರು ಓಡಾಡುತ್ತಿದ್ದಾರೆ. ಪ್ರತಿದಿನ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಪಾದಾಚಾರಿಗಳು ಬಿದ್ದು ಗಾಯಗೊಂಡಿದ್ದಾರೆ.

ಈ ಹಿನ್ನೆಲೆ ಸೇತುವೆಯನ್ನು ಆದಷ್ಟು ಬೇಗ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಈಗ ನೀವು ಬಿಡುಗಡೆ ಮಾಡಿರುವ ಒಂದು ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಬಹುದೇ ಎಂದು ಪ್ರಶ್ನಿಸಿದರು.

ಪ್ರತಿಕ್ರಿಯಿಸಿದ ಸಚಿವ ಒಂದು ಕೋಟಿ ಹಣದಲ್ಲಿ ಕಾಮಗಾರಿ ನಡೆಸಬಹುದೆಂದು ತಿಳಿಸಿದರು. ಶಾಸಕ ನರೇಂದ್ರ ಎರಡುವರೆ ಕೋಟಿ ಅನುದಾನ ಸಾಕಾಗುತ್ತದೆ ಆದ್ದರಿಂದ ಇನ್ನೂ ಎರಡು ಕೋಟಿ ಅನುದಾನ ನೀಡಿ ಕಾಮಗಾರಿಯನ್ನು ಪ್ರಾರಂಭಿಸುವುದರ ಮೂಲಕ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದರು

andolana

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

1 hour ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

1 hour ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago