ಚಾಮರಾಜನಗರ

ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ

ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು.

ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ ಈಗಾಗಲೇ ಒಂದು ಕೋಟಿ ಮಂಜೂರಾಗಿದ್ದು, ಇನ್ನು ನಾಲ್ಕು ಕೋಟಿ ಅನುದಾನ ಬೇಕೆಂದು ಅಧಿಕಾರಿಗಳು ವರದಿ ನೀಡಿದ್ದಾರೆ ಈ ಸಂಬಂಧ ಅನುಮೋದನೆಗಾಗಿ ಹಣಕಾಸು ಇಲಾಖೆಗೆ ವರದಿ ಸಲ್ಲಿಸಲಾಗಿದೆ.ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾದ ನಂತರ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮರು ಪ್ರಶ್ನೆ ಸಲ್ಲಿಸಿದ ಶಾಸಕ ಆರ್ ನರೇಂದ್ರ ವಡಕೆ ಹಳ್ಳ ಗ್ರಾಮದಿಂದ ರಾಮಾಪುರದವರಿಗೆ 72 ಕಿ.ಮೀ ರಸ್ತೆ ಈ ಹಿಂದೆ ಎಂಡಿಆರ್ ರಸ್ತೆಯಾಗಿದ್ದು ಇದೀಗ ಮೇಲ್ದರ್ಜೆಗೇರಿದೆ. ಈ ವ್ಯಾಪ್ತಿಯಲ್ಲಿ ನಾಲ್ಕು ಗ್ರಾಮ ಪಂಚಾಯಿತಿ ಜನರು ಓಡಾಡುತ್ತಿದ್ದಾರೆ. ಪ್ರತಿದಿನ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಪಾದಾಚಾರಿಗಳು ಬಿದ್ದು ಗಾಯಗೊಂಡಿದ್ದಾರೆ.

ಈ ಹಿನ್ನೆಲೆ ಸೇತುವೆಯನ್ನು ಆದಷ್ಟು ಬೇಗ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಈಗ ನೀವು ಬಿಡುಗಡೆ ಮಾಡಿರುವ ಒಂದು ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಬಹುದೇ ಎಂದು ಪ್ರಶ್ನಿಸಿದರು.

ಪ್ರತಿಕ್ರಿಯಿಸಿದ ಸಚಿವ ಒಂದು ಕೋಟಿ ಹಣದಲ್ಲಿ ಕಾಮಗಾರಿ ನಡೆಸಬಹುದೆಂದು ತಿಳಿಸಿದರು. ಶಾಸಕ ನರೇಂದ್ರ ಎರಡುವರೆ ಕೋಟಿ ಅನುದಾನ ಸಾಕಾಗುತ್ತದೆ ಆದ್ದರಿಂದ ಇನ್ನೂ ಎರಡು ಕೋಟಿ ಅನುದಾನ ನೀಡಿ ಕಾಮಗಾರಿಯನ್ನು ಪ್ರಾರಂಭಿಸುವುದರ ಮೂಲಕ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದರು

andolana

Recent Posts

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

31 seconds ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

15 mins ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

20 mins ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

47 mins ago

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

3 hours ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

3 hours ago