ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು.
ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ ಈಗಾಗಲೇ ಒಂದು ಕೋಟಿ ಮಂಜೂರಾಗಿದ್ದು, ಇನ್ನು ನಾಲ್ಕು ಕೋಟಿ ಅನುದಾನ ಬೇಕೆಂದು ಅಧಿಕಾರಿಗಳು ವರದಿ ನೀಡಿದ್ದಾರೆ ಈ ಸಂಬಂಧ ಅನುಮೋದನೆಗಾಗಿ ಹಣಕಾಸು ಇಲಾಖೆಗೆ ವರದಿ ಸಲ್ಲಿಸಲಾಗಿದೆ.ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾದ ನಂತರ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಮರು ಪ್ರಶ್ನೆ ಸಲ್ಲಿಸಿದ ಶಾಸಕ ಆರ್ ನರೇಂದ್ರ ವಡಕೆ ಹಳ್ಳ ಗ್ರಾಮದಿಂದ ರಾಮಾಪುರದವರಿಗೆ 72 ಕಿ.ಮೀ ರಸ್ತೆ ಈ ಹಿಂದೆ ಎಂಡಿಆರ್ ರಸ್ತೆಯಾಗಿದ್ದು ಇದೀಗ ಮೇಲ್ದರ್ಜೆಗೇರಿದೆ. ಈ ವ್ಯಾಪ್ತಿಯಲ್ಲಿ ನಾಲ್ಕು ಗ್ರಾಮ ಪಂಚಾಯಿತಿ ಜನರು ಓಡಾಡುತ್ತಿದ್ದಾರೆ. ಪ್ರತಿದಿನ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಪಾದಾಚಾರಿಗಳು ಬಿದ್ದು ಗಾಯಗೊಂಡಿದ್ದಾರೆ.
ಈ ಹಿನ್ನೆಲೆ ಸೇತುವೆಯನ್ನು ಆದಷ್ಟು ಬೇಗ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಈಗ ನೀವು ಬಿಡುಗಡೆ ಮಾಡಿರುವ ಒಂದು ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಬಹುದೇ ಎಂದು ಪ್ರಶ್ನಿಸಿದರು.
ಪ್ರತಿಕ್ರಿಯಿಸಿದ ಸಚಿವ ಒಂದು ಕೋಟಿ ಹಣದಲ್ಲಿ ಕಾಮಗಾರಿ ನಡೆಸಬಹುದೆಂದು ತಿಳಿಸಿದರು. ಶಾಸಕ ನರೇಂದ್ರ ಎರಡುವರೆ ಕೋಟಿ ಅನುದಾನ ಸಾಕಾಗುತ್ತದೆ ಆದ್ದರಿಂದ ಇನ್ನೂ ಎರಡು ಕೋಟಿ ಅನುದಾನ ನೀಡಿ ಕಾಮಗಾರಿಯನ್ನು ಪ್ರಾರಂಭಿಸುವುದರ ಮೂಲಕ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದರು
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…