ಚಾಮರಾಜನಗರ

ಎಲ್ಲಾ ಜಾತಿ, ಧರ್ಮದ ಬಡವರಿಗೆ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ : ಸಿ.ಎಂ

ಚಾಮರಾಜನಗರ : ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈಗಾಗಲೇ 2 ಕೋಟಿ ರೂಪಾಯಿಯಲ್ಲಿ 50 ಲಕ್ಷ ರೂಪಾಯಿ ಬಿಡುಗಡೆ ಆಗಿದೆ. ಹಲವರು ದೇಣಿಗೆ ಕೂಡ ಕೊಟ್ಟಿದ್ದಾರೆ. ಇವರೆಲ್ಲರಿಗೂ ಒಳ್ಳೆಯದಾಗಲಿ ಎಂದರು.

ಸಮುದಾಯ ಭವನ ಕಟ್ಟಿ. ಆದರೆ, ಇದಕ್ಕಿಂತ ಹೆಚ್ಚಾಗಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆ ನಿರ್ಮಿಸಿ, ಜಿಲ್ಲೆಯ ಎಲ್ಲಾ ಹಿಂದುಳಿದ ಸಮುದಾಯಗಳ ಬಡ ಮಕ್ಕಳಿಗೆ ಶೈಕ್ಷಣಿಕ ನೆರವು ದೊರಕುವಂತೆ ಮಾಡಿ ಎಂದು ಕರೆ ನೀಡಿದರು.

ಚಾಮರಾಜನಗರ ಜಿಲ್ಲೆ ಅತ್ಯಂತ ಹಿಂದುಳಿದಿರುವ ಜಿಲ್ಲೆ. ಇಲ್ಲಿ ಶಿಕ್ಷಣ ಹೆಚ್ಚೆಚ್ಚು ಸಿಗಬೇಕಿದೆ. ಶಿಕ್ಷಣ ಕಲಿಯಬೇಕಿದ್ದರೆ ಹಾಸ್ಟೆಲ್ ಗಳ ಅಗತ್ಯವೂ ಇದೆ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಸೇರಿ ನಮ್ಮ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡ ಮಹಿಳೆಯರಿಗೂ ಅನುಕೂಲ ಆಗುತ್ತಿದೆ. ಕೆಲಸಕ್ಕೆ ಹೋಗುವ ಬಡ ಮತ್ತು ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಇದರಿಂದ ಹೆಚ್ಚು ಸಮಾಧಾನ ಆಗಿದೆ. ವಿದ್ಯಾರ್ಥಿನಿಯರಿಗೂ ಸಮಾಧಾನ ಆಗಿದೆ. ಹೀಗೆ ಎಲ್ಲಾ ಜಾತಿಯ ಬಡವರು, ಮಧ್ಯಮ ವರ್ಗದವರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಸಾಮಾಜಿಕ ಸಮೀಕ್ಷೆ
ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ ಸಿಎಂ ಗಳು ಸ್ವೀಕರಿಸಿಲ್ಲ. ನಾನು ಸ್ವೀಕರಿಸಿ ಕ್ಯಾಬಿನೆಟ್ ಮುಂದೆ ಇಟ್ಟಿದ್ದೀನಿ. ಇದು ಯಾರ ವಿರುದ್ಧವೂ ಇರುವ ಸಮೀಕ್ಷೆ ಅಲ್ಲ. ಎಲ್ಲರ ಸ್ಥಿತಿ ಗತಿ ತಿಳಿಯುವ ಸಮೀಕ್ಷೆ ಮಾತ್ರ ಆಗಿದೆ ಎಂದರು.

ಬಿಜೆಪಿಯ ರಾಮಾ ಜೋಯಿಸ್ ಅವರು ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದರು. ನಿಮಗೆ ಸೈದ್ಧಾಂತಿಕವಾಗಿ ಸ್ಪಷ್ಟ ತಿಳಿವಳಿಕೆ ಇರಬೇಕು.

ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದರು.

ಚಾಮರಾಜನಗರ ಇಷ್ಟವಾದ ಜಿಲ್ಲೆ
ನನಗೆ ಚಾಮರಾಜನಗರ ಅತ್ಯಂತ ಇಷ್ಟವಾದ ಜಿಲ್ಲೆ. ಚಾಮರಾಜನಗರಕ್ಕೆ 20 ಸಾರಿ ಬಂದು-ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago