bus accident DSS activist death
ಚಾಮರಾಜನಗರ : ನಗರದಲ್ಲಿ ಸೋಮವಾರ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಾದ ದಸಂಸ ಜಿಲ್ಲಾ ಸಂಯೋಜಕ ಕೆಂಪನಪುರ ಕೆ.ಎಂ.ನಾಗರಾಜು ಮೃತಪಟ್ಟಿದ್ದಾರೆ.
ಸಂತೇಮರಹಳ್ಳಿ ಶ್ರೀ ರಾಮಚಂದ್ರ ಸಿಪಿಇಡಿ ಕಾಲೇಜು ಪ್ರಾಚಾರ್ಯರೂ ಆದ ತಾಲ್ಲೂಕಿನ ಕೆಂಪನಪುರ ಗ್ರಾಮದ ನಾಗರಾಜು(59) ಅವರು ಬೈಕ್ನಲ್ಲಿ (ಕೆಎ10 ವೈ 5676) ಬರುತ್ತಿದ್ದಾಗ ಸಾರಿಗೆ ಬಸ್ (ಕೆಎ10 ಎಫ್0132) ಸ್ಪರ್ಶಿಸಿದ್ದು ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಗಡೆ ಬಿದ್ದ ಅವರ ಮೇಲೆ ಬಸ್ ಹರಿದು ಬೆಳಿಗ್ಗೆ 9.45ರಲ್ಲಿ ಘಟನೆ ಸಂಭವಿಸಿದೆ. ತೀವ್ರ ರಕ್ತಸ್ರಾವವಾಗಿ ಬಿದ್ದ ಅವರನ್ನು ತಕ್ಷಣ ನಗರದ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಯಿತ್ತಾದರೂ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದರು.
ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಇಲ್ಲಿನ ಬುದ್ಧ ನಗರದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿತ್ತು. ಸಾರ್ವಜನಿಕರು ಅಂತಿಮ ದರ್ಶನ ಪಡೆದ ಬಳಿಕ ಸ್ವಗ್ರಾಮ ಕೆಂಪನಪುರಕ್ಕೆ ಮೃತದೇಹ ಕೊಂಡೊಯ್ದು ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹೆಸರು ಮಾಡಿದ್ದ ಮೃತರು, ಕ್ರೀಡೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಜನಾನುರಾಗಿ ಹಾಗೂ ಉತ್ತಮ ಸಂಘಟಕರಾಗಿದ್ದರು. ದಲಿತ ಸಂಘರ್ಷ ಸಮಿತಿಯಲ್ಲಿ ದೀರ್ಘ ಕಾಲದಿಂದ ಗುರುತಿಸಿಕೊಂಡಿದ್ದರು.
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಆಪ್ತರಾಗಿದ್ದರು. ಇತ್ತೀಚೆಗೆ ಸ್ವಗ್ರಾಮ ಕೆಂಪನ ಪುರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಆಹ್ವಾನಿಸಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿದ್ದರು.
ಘಟನಾ ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆ ಎಸ್ಐ ಹನುಮಂತ ಉಪ್ಪಾರ್,ಎಎಸ್ಐ ಲಿಂಗರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಚಾಲಕ ಮತ್ತು ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…