bus accident DSS activist death
ಚಾಮರಾಜನಗರ : ನಗರದಲ್ಲಿ ಸೋಮವಾರ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಾದ ದಸಂಸ ಜಿಲ್ಲಾ ಸಂಯೋಜಕ ಕೆಂಪನಪುರ ಕೆ.ಎಂ.ನಾಗರಾಜು ಮೃತಪಟ್ಟಿದ್ದಾರೆ.
ಸಂತೇಮರಹಳ್ಳಿ ಶ್ರೀ ರಾಮಚಂದ್ರ ಸಿಪಿಇಡಿ ಕಾಲೇಜು ಪ್ರಾಚಾರ್ಯರೂ ಆದ ತಾಲ್ಲೂಕಿನ ಕೆಂಪನಪುರ ಗ್ರಾಮದ ನಾಗರಾಜು(59) ಅವರು ಬೈಕ್ನಲ್ಲಿ (ಕೆಎ10 ವೈ 5676) ಬರುತ್ತಿದ್ದಾಗ ಸಾರಿಗೆ ಬಸ್ (ಕೆಎ10 ಎಫ್0132) ಸ್ಪರ್ಶಿಸಿದ್ದು ನಿಯಂತ್ರಣ ತಪ್ಪಿ ಬೈಕ್ನಿಂದ ಕೆಳಗಡೆ ಬಿದ್ದ ಅವರ ಮೇಲೆ ಬಸ್ ಹರಿದು ಬೆಳಿಗ್ಗೆ 9.45ರಲ್ಲಿ ಘಟನೆ ಸಂಭವಿಸಿದೆ. ತೀವ್ರ ರಕ್ತಸ್ರಾವವಾಗಿ ಬಿದ್ದ ಅವರನ್ನು ತಕ್ಷಣ ನಗರದ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಯಿತ್ತಾದರೂ ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದರು.
ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಇಲ್ಲಿನ ಬುದ್ಧ ನಗರದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿತ್ತು. ಸಾರ್ವಜನಿಕರು ಅಂತಿಮ ದರ್ಶನ ಪಡೆದ ಬಳಿಕ ಸ್ವಗ್ರಾಮ ಕೆಂಪನಪುರಕ್ಕೆ ಮೃತದೇಹ ಕೊಂಡೊಯ್ದು ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಹೆಸರು ಮಾಡಿದ್ದ ಮೃತರು, ಕ್ರೀಡೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಜನಾನುರಾಗಿ ಹಾಗೂ ಉತ್ತಮ ಸಂಘಟಕರಾಗಿದ್ದರು. ದಲಿತ ಸಂಘರ್ಷ ಸಮಿತಿಯಲ್ಲಿ ದೀರ್ಘ ಕಾಲದಿಂದ ಗುರುತಿಸಿಕೊಂಡಿದ್ದರು.
ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಆಪ್ತರಾಗಿದ್ದರು. ಇತ್ತೀಚೆಗೆ ಸ್ವಗ್ರಾಮ ಕೆಂಪನ ಪುರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಆಹ್ವಾನಿಸಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿದ್ದರು.
ಘಟನಾ ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆ ಎಸ್ಐ ಹನುಮಂತ ಉಪ್ಪಾರ್,ಎಎಸ್ಐ ಲಿಂಗರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಚಾಲಕ ಮತ್ತು ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…