ಚಾಮರಾಜನಗರ

ಬಸ್ ಕಾರು ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಕಾರು ಚಾಲಕ ಸಾವು

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ ವ್ಯಕ್ತಿ. ಈತ ಕಾರಿನಲ್ಲಿ ಕೊಳ್ಳೇಗಾಲ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದು ಮಳವಳ್ಳಿ ಕಡೆಯಿಂದ ಬಂದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ (ಕೆಎ-10, ಎ-7653) ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ವಿಘ್ನೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಉಳಿದಂತೆ ಬಸ್‌ನ ಚಾಲಕ ರಮೇಶ್ ಹಾಗೂ ಬಸ್‌ನಲ್ಲಿದ್ದ ಕೊಳ್ಳೇಗಾಲ ತಾಲೂಕಿನ ಪಾಳ್ಯ ಮೂಲದ ಜಯರಾಮ್ ಎಂಬುವವರಿಗೆ ಗಾಯಗಳಾಗಿದ್ದು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದ ಮೃತದೇಹವನ್ನು ಹೊರತೆಗೆದರು. ನಂತರ ಮೃತದೇಹವನ್ನು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಲೋಕಾಯುಕ್ತ ಪೊಲೀಸರಿಂದ ಏಳು ಕಡೆ ದಾಳಿ: ದಾಖಲೆಗಳ ಪರಿಶೀಲನೆ

ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…

20 mins ago

ಸರಗೂರು| ಕಾಡಾನೆ ದಾಳಿ: ದೇವಸ್ಥಾನದ ಕಾವಲುಗಾರ ಸಾವು

ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…

1 hour ago

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

4 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

4 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

4 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

4 hours ago