ಚಾಮರಾಜನಗರ

ಇಳಿಜಾರಿನಲ್ಲಿ ಬಸ್‌ ಬ್ರೇಕ್‌ ಫೇಲ್ಯೂರ್‌ ; ಸಾರಿಗೆ ಸಂಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ

ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್ ನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಇಳಿಜಾರಿನಲ್ಲಿ ಚಾಲಕ ಗಣೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಸಾರಿಗೆ ಸಂಸ್ಥೆ ಬಸ್ ನಲ್ಲಿ 26 ಮಂದಿ ಪುರುಷ ಪ್ರಯಾಣಿಕರು, 46 ಮಂದಿ ಮಹಿಳಾ ಪ್ರಯಾಣಿಕರಿದ್ದರು. ಬೆಟ್ಟದಿಂದ ಇಳಿಯುವಾಗ ತಾಳುಬೆಟ್ಟದ ೧ ನೇ ತಿರುವಿನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಪ್ರಪಾತಕ್ಕೆ ಬಸ್ ಬೀಳುವುದನ್ನು ತಪ್ಪಿಸಲು ಕಲ್ಲಿನಗೋಡೆಗೆ ಬಸ್ ನುಗ್ಗಿಸಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪರಿಶೀಲಿಸಿದಾಗ ಬ್ರೇಕ್ ಪ್ಯಾಡ್ ಗಳು ಸರಿಯಾಗಿದ್ದವು, ಎಲ್ಲವೂ ಚೆನ್ನಾಗಿಯೇ ಇತ್ತು ಎಂದು ಚಾಲಕ ಗಣೇಶ್ ವಿವರಿಸಿದ್ದಾರೆ.

ಶನಿವಾರ ರಾತ್ರಿಯಷ್ಟೆ ಹಾಲರವಿ ಹಳ್ಳದ ತಿರುವಿನಲ್ಲಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೇ ಇಂದು ಬಸ್ ಬ್ರೇಕ್ ಫೇಲ್ಯೂರ್ ಆಗಿರುವುದಕ್ಕೆ ಸ್ಥಳೀಯರು, ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲಲ್ಲಿ ದುರಸ್ತಿಯಾಗಿ ನಿಂತಿರುವ ಬಸ್: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಿವಿಧ ಜಿಲ್ಲೆಗಳ ಡಿಪೋಗಳಿಂದ ತೆರಳಿರುವ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣಿ ಮಾಡದೇ ಇರುವುದರಿಂದ ಮಲ್ಲಯ್ಯನಪುರ, ರಂಗಸ್ವಾಮಿ ಒಡ್ಡು,ತಾಳಬೆಟ್ಟದ ಸಮೀಪ ಮೂರು ಬಸ್ಸುಗಳು ದುರಸ್ತಿಯಾಗಿ ನಿಂತಿದ್ದವು. ಇದರಿಂದ ಭಕ್ತಾದಿಗಳಿಗೆ ತೀವ್ರ ತೊಂದರೆಯಾಯಿತು.

ಆಂದೋಲನ ಡೆಸ್ಕ್

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

1 hour ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

2 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

2 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

2 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

2 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

3 hours ago