ಚಾಮರಾಜನಗರ

ಇಳಿಜಾರಿನಲ್ಲಿ ಬಸ್‌ ಬ್ರೇಕ್‌ ಫೇಲ್ಯೂರ್‌ ; ಸಾರಿಗೆ ಸಂಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ

ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್ ನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಇಳಿಜಾರಿನಲ್ಲಿ ಚಾಲಕ ಗಣೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಸಾರಿಗೆ ಸಂಸ್ಥೆ ಬಸ್ ನಲ್ಲಿ 26 ಮಂದಿ ಪುರುಷ ಪ್ರಯಾಣಿಕರು, 46 ಮಂದಿ ಮಹಿಳಾ ಪ್ರಯಾಣಿಕರಿದ್ದರು. ಬೆಟ್ಟದಿಂದ ಇಳಿಯುವಾಗ ತಾಳುಬೆಟ್ಟದ ೧ ನೇ ತಿರುವಿನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಪ್ರಪಾತಕ್ಕೆ ಬಸ್ ಬೀಳುವುದನ್ನು ತಪ್ಪಿಸಲು ಕಲ್ಲಿನಗೋಡೆಗೆ ಬಸ್ ನುಗ್ಗಿಸಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪರಿಶೀಲಿಸಿದಾಗ ಬ್ರೇಕ್ ಪ್ಯಾಡ್ ಗಳು ಸರಿಯಾಗಿದ್ದವು, ಎಲ್ಲವೂ ಚೆನ್ನಾಗಿಯೇ ಇತ್ತು ಎಂದು ಚಾಲಕ ಗಣೇಶ್ ವಿವರಿಸಿದ್ದಾರೆ.

ಶನಿವಾರ ರಾತ್ರಿಯಷ್ಟೆ ಹಾಲರವಿ ಹಳ್ಳದ ತಿರುವಿನಲ್ಲಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೇ ಇಂದು ಬಸ್ ಬ್ರೇಕ್ ಫೇಲ್ಯೂರ್ ಆಗಿರುವುದಕ್ಕೆ ಸ್ಥಳೀಯರು, ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲಲ್ಲಿ ದುರಸ್ತಿಯಾಗಿ ನಿಂತಿರುವ ಬಸ್: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಿವಿಧ ಜಿಲ್ಲೆಗಳ ಡಿಪೋಗಳಿಂದ ತೆರಳಿರುವ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣಿ ಮಾಡದೇ ಇರುವುದರಿಂದ ಮಲ್ಲಯ್ಯನಪುರ, ರಂಗಸ್ವಾಮಿ ಒಡ್ಡು,ತಾಳಬೆಟ್ಟದ ಸಮೀಪ ಮೂರು ಬಸ್ಸುಗಳು ದುರಸ್ತಿಯಾಗಿ ನಿಂತಿದ್ದವು. ಇದರಿಂದ ಭಕ್ತಾದಿಗಳಿಗೆ ತೀವ್ರ ತೊಂದರೆಯಾಯಿತು.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

9 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

28 mins ago

ಇಂಡಿಗೋ ಬಿಕ್ಕಟ್ಟು : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…

36 mins ago

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

1 hour ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

1 hour ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

2 hours ago