ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್ ನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಇಳಿಜಾರಿನಲ್ಲಿ ಚಾಲಕ ಗಣೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಸಾರಿಗೆ ಸಂಸ್ಥೆ ಬಸ್ ನಲ್ಲಿ 26 ಮಂದಿ ಪುರುಷ ಪ್ರಯಾಣಿಕರು, 46 ಮಂದಿ ಮಹಿಳಾ ಪ್ರಯಾಣಿಕರಿದ್ದರು. ಬೆಟ್ಟದಿಂದ ಇಳಿಯುವಾಗ ತಾಳುಬೆಟ್ಟದ ೧ ನೇ ತಿರುವಿನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಪ್ರಪಾತಕ್ಕೆ ಬಸ್ ಬೀಳುವುದನ್ನು ತಪ್ಪಿಸಲು ಕಲ್ಲಿನಗೋಡೆಗೆ ಬಸ್ ನುಗ್ಗಿಸಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪರಿಶೀಲಿಸಿದಾಗ ಬ್ರೇಕ್ ಪ್ಯಾಡ್ ಗಳು ಸರಿಯಾಗಿದ್ದವು, ಎಲ್ಲವೂ ಚೆನ್ನಾಗಿಯೇ ಇತ್ತು ಎಂದು ಚಾಲಕ ಗಣೇಶ್ ವಿವರಿಸಿದ್ದಾರೆ.
ಶನಿವಾರ ರಾತ್ರಿಯಷ್ಟೆ ಹಾಲರವಿ ಹಳ್ಳದ ತಿರುವಿನಲ್ಲಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೇ ಇಂದು ಬಸ್ ಬ್ರೇಕ್ ಫೇಲ್ಯೂರ್ ಆಗಿರುವುದಕ್ಕೆ ಸ್ಥಳೀಯರು, ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ಅಲ್ಲಲ್ಲಿ ದುರಸ್ತಿಯಾಗಿ ನಿಂತಿರುವ ಬಸ್: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಿವಿಧ ಜಿಲ್ಲೆಗಳ ಡಿಪೋಗಳಿಂದ ತೆರಳಿರುವ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣಿ ಮಾಡದೇ ಇರುವುದರಿಂದ ಮಲ್ಲಯ್ಯನಪುರ, ರಂಗಸ್ವಾಮಿ ಒಡ್ಡು,ತಾಳಬೆಟ್ಟದ ಸಮೀಪ ಮೂರು ಬಸ್ಸುಗಳು ದುರಸ್ತಿಯಾಗಿ ನಿಂತಿದ್ದವು. ಇದರಿಂದ ಭಕ್ತಾದಿಗಳಿಗೆ ತೀವ್ರ ತೊಂದರೆಯಾಯಿತು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…