ಚಾಮರಾಜನಗರ

ಇಳಿಜಾರಿನಲ್ಲಿ ಬಸ್‌ ಬ್ರೇಕ್‌ ಫೇಲ್ಯೂರ್‌ ; ಸಾರಿಗೆ ಸಂಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ

ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್ ನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಇಳಿಜಾರಿನಲ್ಲಿ ಚಾಲಕ ಗಣೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಸಾರಿಗೆ ಸಂಸ್ಥೆ ಬಸ್ ನಲ್ಲಿ 26 ಮಂದಿ ಪುರುಷ ಪ್ರಯಾಣಿಕರು, 46 ಮಂದಿ ಮಹಿಳಾ ಪ್ರಯಾಣಿಕರಿದ್ದರು. ಬೆಟ್ಟದಿಂದ ಇಳಿಯುವಾಗ ತಾಳುಬೆಟ್ಟದ ೧ ನೇ ತಿರುವಿನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಪ್ರಪಾತಕ್ಕೆ ಬಸ್ ಬೀಳುವುದನ್ನು ತಪ್ಪಿಸಲು ಕಲ್ಲಿನಗೋಡೆಗೆ ಬಸ್ ನುಗ್ಗಿಸಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪರಿಶೀಲಿಸಿದಾಗ ಬ್ರೇಕ್ ಪ್ಯಾಡ್ ಗಳು ಸರಿಯಾಗಿದ್ದವು, ಎಲ್ಲವೂ ಚೆನ್ನಾಗಿಯೇ ಇತ್ತು ಎಂದು ಚಾಲಕ ಗಣೇಶ್ ವಿವರಿಸಿದ್ದಾರೆ.

ಶನಿವಾರ ರಾತ್ರಿಯಷ್ಟೆ ಹಾಲರವಿ ಹಳ್ಳದ ತಿರುವಿನಲ್ಲಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೇ ಇಂದು ಬಸ್ ಬ್ರೇಕ್ ಫೇಲ್ಯೂರ್ ಆಗಿರುವುದಕ್ಕೆ ಸ್ಥಳೀಯರು, ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲಲ್ಲಿ ದುರಸ್ತಿಯಾಗಿ ನಿಂತಿರುವ ಬಸ್: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಿವಿಧ ಜಿಲ್ಲೆಗಳ ಡಿಪೋಗಳಿಂದ ತೆರಳಿರುವ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣಿ ಮಾಡದೇ ಇರುವುದರಿಂದ ಮಲ್ಲಯ್ಯನಪುರ, ರಂಗಸ್ವಾಮಿ ಒಡ್ಡು,ತಾಳಬೆಟ್ಟದ ಸಮೀಪ ಮೂರು ಬಸ್ಸುಗಳು ದುರಸ್ತಿಯಾಗಿ ನಿಂತಿದ್ದವು. ಇದರಿಂದ ಭಕ್ತಾದಿಗಳಿಗೆ ತೀವ್ರ ತೊಂದರೆಯಾಯಿತು.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

12 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

13 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

13 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

13 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

14 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago