ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್ ನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಇಳಿಜಾರಿನಲ್ಲಿ ಚಾಲಕ ಗಣೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಸಾರಿಗೆ ಸಂಸ್ಥೆ ಬಸ್ ನಲ್ಲಿ 26 ಮಂದಿ ಪುರುಷ ಪ್ರಯಾಣಿಕರು, 46 ಮಂದಿ ಮಹಿಳಾ ಪ್ರಯಾಣಿಕರಿದ್ದರು. ಬೆಟ್ಟದಿಂದ ಇಳಿಯುವಾಗ ತಾಳುಬೆಟ್ಟದ ೧ ನೇ ತಿರುವಿನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಪ್ರಪಾತಕ್ಕೆ ಬಸ್ ಬೀಳುವುದನ್ನು ತಪ್ಪಿಸಲು ಕಲ್ಲಿನಗೋಡೆಗೆ ಬಸ್ ನುಗ್ಗಿಸಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪರಿಶೀಲಿಸಿದಾಗ ಬ್ರೇಕ್ ಪ್ಯಾಡ್ ಗಳು ಸರಿಯಾಗಿದ್ದವು, ಎಲ್ಲವೂ ಚೆನ್ನಾಗಿಯೇ ಇತ್ತು ಎಂದು ಚಾಲಕ ಗಣೇಶ್ ವಿವರಿಸಿದ್ದಾರೆ.
ಶನಿವಾರ ರಾತ್ರಿಯಷ್ಟೆ ಹಾಲರವಿ ಹಳ್ಳದ ತಿರುವಿನಲ್ಲಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈಗ ಮತ್ತೇ ಇಂದು ಬಸ್ ಬ್ರೇಕ್ ಫೇಲ್ಯೂರ್ ಆಗಿರುವುದಕ್ಕೆ ಸ್ಥಳೀಯರು, ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ಅಲ್ಲಲ್ಲಿ ದುರಸ್ತಿಯಾಗಿ ನಿಂತಿರುವ ಬಸ್: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಿವಿಧ ಜಿಲ್ಲೆಗಳ ಡಿಪೋಗಳಿಂದ ತೆರಳಿರುವ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣಿ ಮಾಡದೇ ಇರುವುದರಿಂದ ಮಲ್ಲಯ್ಯನಪುರ, ರಂಗಸ್ವಾಮಿ ಒಡ್ಡು,ತಾಳಬೆಟ್ಟದ ಸಮೀಪ ಮೂರು ಬಸ್ಸುಗಳು ದುರಸ್ತಿಯಾಗಿ ನಿಂತಿದ್ದವು. ಇದರಿಂದ ಭಕ್ತಾದಿಗಳಿಗೆ ತೀವ್ರ ತೊಂದರೆಯಾಯಿತು.
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…