Bus Break failure
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ.
ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಿಂದ ಆಗಮಿಸಿ ಮದುವೆ ಮುಗಿದ ನಂತರ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಳುಬೆಟ್ಟದ ನಾಲ್ಕನೇ ತಿರುವಿನಲ್ಲಿ ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಪ್ರಯಾಣಿಕರ ವಾಹನ ಅಪಘಾತಕ್ಕೀಡಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕ್ರೇನ್ ಕರೆಯಿಸಿ ಮಿನಿ ಬಸ್ ಎಳೆದು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…
ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್ನ ಹೊರ್ಮುಜ್…
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…