ಚಾಮರಾಜನಗರ

ಚಾಮರಾಜನಗರ| ಬಸ್ ಬ್ರೇಕ್ ಫೇಲ್ಯೂರ್: ಅರಣ್ಯಕ್ಕೆ ನುಗ್ಗಿದ ಬಸ್

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ.

ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಿಂದ ಆಗಮಿಸಿ ಮದುವೆ ಮುಗಿದ ನಂತರ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಳುಬೆಟ್ಟದ ನಾಲ್ಕನೇ ತಿರುವಿನಲ್ಲಿ ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಪ್ರಯಾಣಿಕರ ವಾಹನ ಅಪಘಾತಕ್ಕೀಡಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಠಾಣೆಯ ಇನ್ಸ್‌ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕ್ರೇನ್ ಕರೆಯಿಸಿ ಮಿನಿ ಬಸ್ ಎಳೆದು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.‌

ಆಂದೋಲನ ಡೆಸ್ಕ್

Recent Posts

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…

1 min ago

ವಾಣಿಜ್ಯ ಸಿಲಿಂಡರ್ ಅಭಾವ ಶುರು

ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…

5 mins ago

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

8 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

10 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

10 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

10 hours ago