ರಾಜೇಶ್ ಬೆಂಡರವಾಡಿ
ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಲಾರಿ ಮತ್ತು ಬಸ್ ಪರಸ್ಪರ ಗುದ್ದಿದ ರಭಸಕ್ಕೆ ಅಶ್ವಮೇಧ ಸಾರಿಗೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಇದರಿಂದ ಬಸ್ ಚಾಲಕ ಮಂಜು ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಂಜನಗೂಡು ಕಡೆಯಿಂದ ಬಸ್, ಚಾಮರಾಜನಗರ ಕಡೆಯಿಂದ ಲಾರಿ ಸಂಚರಿಸುವಾಗ ಗ್ರಾಮದ ಶಾಲೆ ಹತ್ತಿರದ ತಿರುವಿನಲ್ಲಿ ರಾತ್ರಿ 10 ಗಂಟೆ ಸುಮಾರಿನಲ್ಲಿ ಘಟನೆ ಸಂಭವಿಸಿದೆ. ಗಾಯಾಳು ಪ್ರಯಾಣಿಕರನ್ನು ನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮೃತ ಬಸ್ ಚಾಲಕ ಮಂಜು ಎಂಬುವವರು ಯಳಂದೂರು ತಾಲ್ಲೂಕಿನ ಇರಸವಾಡಿ ಗ್ರಾಮದವರಾಗಿದ್ದು, ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…