ರಾಜೇಶ್ ಬೆಂಡರವಾಡಿ
ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಲಾರಿ ಮತ್ತು ಬಸ್ ಪರಸ್ಪರ ಗುದ್ದಿದ ರಭಸಕ್ಕೆ ಅಶ್ವಮೇಧ ಸಾರಿಗೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಇದರಿಂದ ಬಸ್ ಚಾಲಕ ಮಂಜು ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಂಜನಗೂಡು ಕಡೆಯಿಂದ ಬಸ್, ಚಾಮರಾಜನಗರ ಕಡೆಯಿಂದ ಲಾರಿ ಸಂಚರಿಸುವಾಗ ಗ್ರಾಮದ ಶಾಲೆ ಹತ್ತಿರದ ತಿರುವಿನಲ್ಲಿ ರಾತ್ರಿ 10 ಗಂಟೆ ಸುಮಾರಿನಲ್ಲಿ ಘಟನೆ ಸಂಭವಿಸಿದೆ. ಗಾಯಾಳು ಪ್ರಯಾಣಿಕರನ್ನು ನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮೃತ ಬಸ್ ಚಾಲಕ ಮಂಜು ಎಂಬುವವರು ಯಳಂದೂರು ತಾಲ್ಲೂಕಿನ ಇರಸವಾಡಿ ಗ್ರಾಮದವರಾಗಿದ್ದು, ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…