ಗುಂಡ್ಲುಪೇಟೆ: ಬಸ್ ಟಿಕೆಟ್ ವಿಚಾರವಾಗಿ ಪೊಲೀಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಗುರುವಾರ(ಮೇ.30) ನಡೆದಿದೆ.
ಗುಂಡ್ಲುಪೇಟೆ ಡಿಪೋ ಕಂಡಕ್ಟರ್ ಲೋಕೇಶ್ ಹಾಗೂ ಮೈಸೂರು ಸಶಸ್ತ್ರ ಮೀಸಲು ಪಡೆಯ ಕೊಟ್ರೇಶ್ ನಡುವೆ ಜಗಳ ಏರ್ಪಟ್ಟಿದೆ. ಕೊಟ್ರೇಶ್ ಮತ್ತು ಕುಟುಂಬ ನಿನ್ನೆ ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಾಪಸಾಗುವ ವೇಳೆ ಕೊಟ್ರೇಶ್ ಚಿಕ್ಕಮ್ಮ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಅವರೇ ಕೊಟ್ರೇಶ್ಗೆ ಟಿಕೆಟ್ ಸಹಾ ಪಡೆದಿದ್ದಾರೆ. ಆದರೆ, ಇದು ತಿಳಿಯದ ಕೋಟ್ರೇಶ್ ತಾವು ಕುಡಾ ಟಿಕೆಟ್ ಪಡೆದಿದ್ದಾರೆ.
ಬಸ್ನಿಂದ ಇಳಿದ ಬಳಿಕ ಎರಡು ಟಿಕೆಟ್ ನೋಡಿ ಈ ಬಗ್ಗೆ ಕಂಡಕ್ಟರ್ ಬಳಿ ಪರಿಶೀಲಿಸಿದ್ದಾರೆ, ಪರಿಶೀಲನೆ ನಡೆಸುವ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರು ಸ್ಥಳದಲ್ಲೇ ಬಡಿದಾಡಿಕೊಂಡಿದ್ದಾರೆ.
ಸಿವಿಲ್ ಡ್ರೆಸ್ನಲ್ಲಿದ್ದ ಕಾಟ್ರೇಶ್ಗೆ ಸಾರಿಗೆ ಸಂಸ್ಥೆಯ ಇತರ ಚಾಲಕರು ಕಂಡಕ್ಟರ್ ಜತೆ ಸೇರಿ ಕೈ ಮಿಲಾಯಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಇಬ್ಬರು ದೂರು-ಪ್ರತಿದೂರು ನೀಡಿದ್ದಾರೆ.
ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…
ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…