ಗುಂಡ್ಲುಪೇಟೆ: ಬಸ್ ಟಿಕೆಟ್ ವಿಚಾರವಾಗಿ ಪೊಲೀಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಗುರುವಾರ(ಮೇ.30) ನಡೆದಿದೆ.
ಗುಂಡ್ಲುಪೇಟೆ ಡಿಪೋ ಕಂಡಕ್ಟರ್ ಲೋಕೇಶ್ ಹಾಗೂ ಮೈಸೂರು ಸಶಸ್ತ್ರ ಮೀಸಲು ಪಡೆಯ ಕೊಟ್ರೇಶ್ ನಡುವೆ ಜಗಳ ಏರ್ಪಟ್ಟಿದೆ. ಕೊಟ್ರೇಶ್ ಮತ್ತು ಕುಟುಂಬ ನಿನ್ನೆ ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಾಪಸಾಗುವ ವೇಳೆ ಕೊಟ್ರೇಶ್ ಚಿಕ್ಕಮ್ಮ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಅವರೇ ಕೊಟ್ರೇಶ್ಗೆ ಟಿಕೆಟ್ ಸಹಾ ಪಡೆದಿದ್ದಾರೆ. ಆದರೆ, ಇದು ತಿಳಿಯದ ಕೋಟ್ರೇಶ್ ತಾವು ಕುಡಾ ಟಿಕೆಟ್ ಪಡೆದಿದ್ದಾರೆ.
ಬಸ್ನಿಂದ ಇಳಿದ ಬಳಿಕ ಎರಡು ಟಿಕೆಟ್ ನೋಡಿ ಈ ಬಗ್ಗೆ ಕಂಡಕ್ಟರ್ ಬಳಿ ಪರಿಶೀಲಿಸಿದ್ದಾರೆ, ಪರಿಶೀಲನೆ ನಡೆಸುವ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರು ಸ್ಥಳದಲ್ಲೇ ಬಡಿದಾಡಿಕೊಂಡಿದ್ದಾರೆ.
ಸಿವಿಲ್ ಡ್ರೆಸ್ನಲ್ಲಿದ್ದ ಕಾಟ್ರೇಶ್ಗೆ ಸಾರಿಗೆ ಸಂಸ್ಥೆಯ ಇತರ ಚಾಲಕರು ಕಂಡಕ್ಟರ್ ಜತೆ ಸೇರಿ ಕೈ ಮಿಲಾಯಿಸಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಇಬ್ಬರು ದೂರು-ಪ್ರತಿದೂರು ನೀಡಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…