ಚಾಮರಾಜನಗರ

Cabinet Meeting ; ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೈಟ್ಸ್‌

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್‌ಗಳು ಈ ಕೆಳಕಂಡಂತಿವೆ.

ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

* ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲಾ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

* 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.

* PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳ ಅಭಿವೃದ್ಧಿ.

* 1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು.

* ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.

* ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್‌ಗಳ ಜಿಲ್ಲಾಸ್ಪತ್ರೆ.

* ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

* ಹನೂರಿನಲ್ಲಿ ಹೊಸ ತಾಲ್ಲೂಕು ಆಸ್ಪತ್ರೆ, ತಾಲ್ಲೂಕು ಭವನ ನಿರ್ಮಾಣ.

* ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

* ವರುಣಾದ ಇಳಿಯಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ.

* 40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

* ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

* ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

* ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

* ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ.

* ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

* ಒಟ್ಟಾಗಿ 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.

ಆಂದೋಲನ ಡೆಸ್ಕ್

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

23 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

27 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

2 hours ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

2 hours ago