ಚಾಮರಾಜನಗರ

ಹಳ್ಳಕ್ಕೆ ಬಿದ್ದ ಕಾರು : ಐವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆ ವಾಸಿಗಳಾದ ಪ್ರಸನ್ನ, ಕೆಂಪರಾಜು, ತಿಮ್ಮೇಗೌಡ, ಚಾಮುಂಡೇಶ್ವರಿ ನಗರ ವಾಸಿ ಮಂಜುನಾಥ್, ಸುಂಡ್ರಳ್ಳಿಯ ಕೆಂಪರಾಜು ಗಾಯಗೊಂಡವರು. ಇವರಲ್ಲಿ ತಿಮ್ಮೇಗೌಡ ಎಂಬವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಜಾತಿಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಇಬ್ಬರು ಶಿಕ್ಷಕರಿಗೆ ಅಪಘಾತ

ಇವರೆಲ್ಲ ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಮಂಡ್ಯಕ್ಕೆ ಹೋಗುವ ಮೊದಲು ಮ.ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಮುಗಿಸಿ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದು, ಕಾರು ಹಳ್ಳಕ್ಕೆ ಬಿದ್ದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಐವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

47 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago