car crash
ಹನೂರು: ಪವಾಡ ಪುರುಷ ನೆಲೆಸಿರುವ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಯ್ಯನಪುರ ಗ್ರಾಮದ ಮುಖ್ಯ ರಸ್ತೆಯ ಮನೆಯೊಳಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಹಾನಿಯಾಗಿರುವ ಘಟನೆ ಜರುಗಿದೆ.
ಮೈಸೂರು ಮೂಲದ ಕುಟುಂಬದವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಮಲ್ಲಯ್ಯನಪುರ ಗ್ರಾಮದ ಬಳಿ ತೆರಳುತ್ತಿದ್ದಾಗ ರಸ್ತೆಯ ಮಾರ್ಗದಲ್ಲಿ ಬಂದ ಹಸುವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸತೀಶ್ ಎಂಬುವವರ ಮನೆಯ ಮುಂಭಾಗಕ್ಕೆ ನುಗ್ಗಿದೆ.
ಪರಿಣಾಮ ಮನೆಯ ಮುಂಭಾಗ ಅಳವಡಿಸಿದ್ದ ಸೀಟ್ ಹಾಗೂ ಕೆಲವು ಪರಿಕರಗಳು ಹಾನಿಗೊಳಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ನಾಮಫಲಕ ಅಳವಡಿಸಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಇತ್ತೀಚಿನ ದಿನಗಳಲ್ಲಿ ಲಕ್ಷಾಂತರ ಭಕ್ತಾದಿಗಳು ತಮ್ಮ ಕಾರು, ದ್ವಿಚಕ್ರ ವಾಹನ, ಟೆಂಪೋ ಸೇರಿದಂತೆ ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಹನೂರು ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟದವರೆಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೀವ್ರ ತಿರುವು ಹಾಗೂ ಪ್ರಮುಖ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ನಾಮಫಲಕಗಳನ್ನು ಅಳವಡಿಸದೇ ಇರುವುದರಿಂದ ಹೊಸದಾಗಿ ಬರುವ ಚಾಲಕರಿಗೆ ರಸ್ತೆಯ ಬಗ್ಗೆ ಅರಿವಿರುವುದಿಲ್ಲ. ಪರಿಣಾಮ ಆಗಾಗ ಅಪಘಾತವಾಗುತ್ತಿದೆ. ಮುಂದಿನ ದಿನಗಳಲ್ಲಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಾಮಫಲಕ ಅಳವಡಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…