ಚಾಮರಾಜನಗರ

61 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ಲೂಟಿ : ಮನೆ ಮಾಲೀಕರು ದಸರಾ ನೋಡಲು ಮೈಸೂರಿಗೆ ತೆರಳಿದ್ದಾಗ ಕಳ್ಳರ ಕೈಚಳಕ

ಗುಂಡ್ಲುಪೇಟೆ : ಪಟ್ಟಣದ ಕುವೆಂಪುನಗರ (ಜನತಾ ನಗರ)ದ ಉಮೇಶ್ ಎಂಬವರ ಮನೆ ಬಾಗಿಲು ಮುರಿದು ಒಳಗೆ ನುಗ್ಗಿ ಸುಮಾರು ೩೦೦ ಗ್ರಾಂ ಚಿನ್ನ, ೨ ಕೆಜಿ ಬೆಳ್ಳಿ ನಾಣ್ಯಗಳು, ೨೯ ಲಕ್ಷ ರೂ. ನಗದು, ೨ ಬೆಲೆಬಾಳುವ ರೇಷ್ಮೆ ಸೀರೆಗಳು, ವಿವಿಧ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ.

ಉಮೇಶ್‌ರವರು ಅಮೋಘ ಎಂಟರ್‌ಪ್ರೈಸಸ್ ಮಾಲೀಕರಾಗಿದ್ದು, ಗುಂಡ್ಲುಪೇಟೆ ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಎದುರು ಬಣ್ಣ, ಕಬ್ಬಿಣ, ಸಿಮೆಂಟ್ ವ್ಯಾಪಾರ ಮಾಡುವ ಅಂಗಡಿ ತೆರೆದಿದ್ದಾರೆ. ಇವರು ಸೆ.೨೮ರಂದು ಮಧ್ಯಾಹ್ನ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿ ಮನೆಯಲ್ಲಿ ಪತ್ನಿ, ಇಬ್ಬರು ಮಕ್ಕಳನ್ನು ಕರೆದುಕೊಂಡು ಮೈಸೂರಿಗೆ ದಸರಾ ದೀಪಾಲಂಕಾರ ನೋಡಲು ಹೋಗಿದ್ದಾರೆ. ಮಧ್ಯರಾತ್ರಿ ಮೈಸೂರಿಂದ ವಾಪಸ್ ಬರುವಷ್ಟರಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ.

ಬೀರು ಮುರಿದು ತಾಳಿ ಸರ, ನೆಕ್ಲೇಸ್, ಬಳೆಗಳು, ಸಣ್ಣ ಚೈನ್‌ಗಳು, ಓಲೆಗಳು, ಮುತ್ತಿನ ಸರ ಸೇರಿದಂತೆ ಅಂದಾಜು ೩೦ ಲಕ್ಷ ರೂ. ಮೌಲ್ಯದ ೩೦೦ ಗ್ರಾಂ ಚಿನ್ನಾಭರಣ, ೨ ಲಕ್ಷ ರೂ. ಮೌಲ್ಯದ ಎರಡು ಕೆಜಿ ತೂಕದ ಬೆಳ್ಳಿ ನಾಣ್ಯಗಳನ್ನು ದೋಚಿದ್ದಾರೆ.

ಇದನ್ನೂ ಓದಿ:-ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ಗ್ಯೂಸ್‌ : ವಯೋಮಿತಿ ಸಡಿಲಿಕೆಗೆ ಅಸ್ತು ಎಂದ ಸರ್ಕಾರ

ಅಂಗಡಿಯಲ್ಲಿ ವ್ಯಾಪಾರವಾಗಿದ್ದ ಹಣ ೨೬ ಲಕ್ಷ ರೂ. ನಗದು, ಪತ್ನಿ ಇಟ್ಟಿದ್ದ ೩ ಲಕ್ಷ ರೂ., ೫೦ ಸಾವಿರ ರೂ. ಮೌಲ್ಯದ ಎರಡು ರೇಷ್ಮೆ ಸೀರೆಗಳು, ಬೆಲೆ ಬಾಳುವ ವಾಚ್‌ಗಳು ಸೇರಿ ಒಟ್ಟಾರೆ ೬೧.೫೦ ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿಯಾಗಿದೆ.

ಈ ಸಂಬಂಧ ಉಮೇಶ್ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

5 mins ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

20 mins ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

36 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

1 hour ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

1 hour ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

1 hour ago