ಚಾಮರಾಜನಗರ

61 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ಲೂಟಿ : ಮನೆ ಮಾಲೀಕರು ದಸರಾ ನೋಡಲು ಮೈಸೂರಿಗೆ ತೆರಳಿದ್ದಾಗ ಕಳ್ಳರ ಕೈಚಳಕ

ಗುಂಡ್ಲುಪೇಟೆ : ಪಟ್ಟಣದ ಕುವೆಂಪುನಗರ (ಜನತಾ ನಗರ)ದ ಉಮೇಶ್ ಎಂಬವರ ಮನೆ ಬಾಗಿಲು ಮುರಿದು ಒಳಗೆ ನುಗ್ಗಿ ಸುಮಾರು ೩೦೦ ಗ್ರಾಂ ಚಿನ್ನ, ೨ ಕೆಜಿ ಬೆಳ್ಳಿ ನಾಣ್ಯಗಳು, ೨೯ ಲಕ್ಷ ರೂ. ನಗದು, ೨ ಬೆಲೆಬಾಳುವ ರೇಷ್ಮೆ ಸೀರೆಗಳು, ವಿವಿಧ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ.

ಉಮೇಶ್‌ರವರು ಅಮೋಘ ಎಂಟರ್‌ಪ್ರೈಸಸ್ ಮಾಲೀಕರಾಗಿದ್ದು, ಗುಂಡ್ಲುಪೇಟೆ ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಎದುರು ಬಣ್ಣ, ಕಬ್ಬಿಣ, ಸಿಮೆಂಟ್ ವ್ಯಾಪಾರ ಮಾಡುವ ಅಂಗಡಿ ತೆರೆದಿದ್ದಾರೆ. ಇವರು ಸೆ.೨೮ರಂದು ಮಧ್ಯಾಹ್ನ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿ ಮನೆಯಲ್ಲಿ ಪತ್ನಿ, ಇಬ್ಬರು ಮಕ್ಕಳನ್ನು ಕರೆದುಕೊಂಡು ಮೈಸೂರಿಗೆ ದಸರಾ ದೀಪಾಲಂಕಾರ ನೋಡಲು ಹೋಗಿದ್ದಾರೆ. ಮಧ್ಯರಾತ್ರಿ ಮೈಸೂರಿಂದ ವಾಪಸ್ ಬರುವಷ್ಟರಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ.

ಬೀರು ಮುರಿದು ತಾಳಿ ಸರ, ನೆಕ್ಲೇಸ್, ಬಳೆಗಳು, ಸಣ್ಣ ಚೈನ್‌ಗಳು, ಓಲೆಗಳು, ಮುತ್ತಿನ ಸರ ಸೇರಿದಂತೆ ಅಂದಾಜು ೩೦ ಲಕ್ಷ ರೂ. ಮೌಲ್ಯದ ೩೦೦ ಗ್ರಾಂ ಚಿನ್ನಾಭರಣ, ೨ ಲಕ್ಷ ರೂ. ಮೌಲ್ಯದ ಎರಡು ಕೆಜಿ ತೂಕದ ಬೆಳ್ಳಿ ನಾಣ್ಯಗಳನ್ನು ದೋಚಿದ್ದಾರೆ.

ಇದನ್ನೂ ಓದಿ:-ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ಗ್ಯೂಸ್‌ : ವಯೋಮಿತಿ ಸಡಿಲಿಕೆಗೆ ಅಸ್ತು ಎಂದ ಸರ್ಕಾರ

ಅಂಗಡಿಯಲ್ಲಿ ವ್ಯಾಪಾರವಾಗಿದ್ದ ಹಣ ೨೬ ಲಕ್ಷ ರೂ. ನಗದು, ಪತ್ನಿ ಇಟ್ಟಿದ್ದ ೩ ಲಕ್ಷ ರೂ., ೫೦ ಸಾವಿರ ರೂ. ಮೌಲ್ಯದ ಎರಡು ರೇಷ್ಮೆ ಸೀರೆಗಳು, ಬೆಲೆ ಬಾಳುವ ವಾಚ್‌ಗಳು ಸೇರಿ ಒಟ್ಟಾರೆ ೬೧.೫೦ ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿಯಾಗಿದೆ.

ಈ ಸಂಬಂಧ ಉಮೇಶ್ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago