Thieves stole gold and cash by breaking the door lock
ಗುಂಡ್ಲುಪೇಟೆ : ಪಟ್ಟಣದ ಕುವೆಂಪುನಗರ (ಜನತಾ ನಗರ)ದ ಉಮೇಶ್ ಎಂಬವರ ಮನೆ ಬಾಗಿಲು ಮುರಿದು ಒಳಗೆ ನುಗ್ಗಿ ಸುಮಾರು ೩೦೦ ಗ್ರಾಂ ಚಿನ್ನ, ೨ ಕೆಜಿ ಬೆಳ್ಳಿ ನಾಣ್ಯಗಳು, ೨೯ ಲಕ್ಷ ರೂ. ನಗದು, ೨ ಬೆಲೆಬಾಳುವ ರೇಷ್ಮೆ ಸೀರೆಗಳು, ವಿವಿಧ ವಸ್ತುಗಳನ್ನು ದೋಚಿರುವ ಘಟನೆ ನಡೆದಿದೆ.
ಉಮೇಶ್ರವರು ಅಮೋಘ ಎಂಟರ್ಪ್ರೈಸಸ್ ಮಾಲೀಕರಾಗಿದ್ದು, ಗುಂಡ್ಲುಪೇಟೆ ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಎದುರು ಬಣ್ಣ, ಕಬ್ಬಿಣ, ಸಿಮೆಂಟ್ ವ್ಯಾಪಾರ ಮಾಡುವ ಅಂಗಡಿ ತೆರೆದಿದ್ದಾರೆ. ಇವರು ಸೆ.೨೮ರಂದು ಮಧ್ಯಾಹ್ನ ಅಂಗಡಿ ಬಾಗಿಲು ಹಾಕಿ ಮನೆಗೆ ತೆರಳಿ ಮನೆಯಲ್ಲಿ ಪತ್ನಿ, ಇಬ್ಬರು ಮಕ್ಕಳನ್ನು ಕರೆದುಕೊಂಡು ಮೈಸೂರಿಗೆ ದಸರಾ ದೀಪಾಲಂಕಾರ ನೋಡಲು ಹೋಗಿದ್ದಾರೆ. ಮಧ್ಯರಾತ್ರಿ ಮೈಸೂರಿಂದ ವಾಪಸ್ ಬರುವಷ್ಟರಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ.
ಬೀರು ಮುರಿದು ತಾಳಿ ಸರ, ನೆಕ್ಲೇಸ್, ಬಳೆಗಳು, ಸಣ್ಣ ಚೈನ್ಗಳು, ಓಲೆಗಳು, ಮುತ್ತಿನ ಸರ ಸೇರಿದಂತೆ ಅಂದಾಜು ೩೦ ಲಕ್ಷ ರೂ. ಮೌಲ್ಯದ ೩೦೦ ಗ್ರಾಂ ಚಿನ್ನಾಭರಣ, ೨ ಲಕ್ಷ ರೂ. ಮೌಲ್ಯದ ಎರಡು ಕೆಜಿ ತೂಕದ ಬೆಳ್ಳಿ ನಾಣ್ಯಗಳನ್ನು ದೋಚಿದ್ದಾರೆ.
ಇದನ್ನೂ ಓದಿ:-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ಗ್ಯೂಸ್ : ವಯೋಮಿತಿ ಸಡಿಲಿಕೆಗೆ ಅಸ್ತು ಎಂದ ಸರ್ಕಾರ
ಅಂಗಡಿಯಲ್ಲಿ ವ್ಯಾಪಾರವಾಗಿದ್ದ ಹಣ ೨೬ ಲಕ್ಷ ರೂ. ನಗದು, ಪತ್ನಿ ಇಟ್ಟಿದ್ದ ೩ ಲಕ್ಷ ರೂ., ೫೦ ಸಾವಿರ ರೂ. ಮೌಲ್ಯದ ಎರಡು ರೇಷ್ಮೆ ಸೀರೆಗಳು, ಬೆಲೆ ಬಾಳುವ ವಾಚ್ಗಳು ಸೇರಿ ಒಟ್ಟಾರೆ ೬೧.೫೦ ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿಯಾಗಿದೆ.
ಈ ಸಂಬಂಧ ಉಮೇಶ್ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…