ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಹನೂರು ತಾಲ್ಲೂಕಿನ ಬೂದಬಾಳು ಗ್ರಾಮದ ಆಕಾಶ್, ಮನೋಜ್, ಶ್ರೀನಿವಾಸ್, ಕಾರ್ತಿಕ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಘಟನೆ ವಿವರ: ಬೂದುಬಾಳು ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವ ಸಂಬಂಧ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಬೂದುಬಾಳು ಗ್ರಾಮದ ದೊಡ್ಡಕೆರೆಯವರೆಗೆ ಪಲ್ಲಕ್ಕಿ ಉತ್ಸವ ತರುವ ವೇಳೆ ಸಾಂಪ್ರದಾಯದಂತೆ ನಾನು ನನ್ನ ಅಣ್ಣ ಹಾಗೂ ಸ್ನೇಹಿತರು ಕುಣಿದುಕೊಂಡು ಬರುತ್ತಿದ್ದಾಗ ನಮ್ಮಗಳ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಂದು ಎಂಬುವವರು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಬ್ ಇನ್ಸ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಅವರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕೊಹ್ಲಿ-ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್, ಎಸ್ಆರ್ಎಚ್ ವಿರುದ್ಧ ಭರ್ಜರಿ ಜಯ ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಸನ್…
ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ…
ಎಚ್.ಡಿ.ಕೋಟೆ: ತಾಲ್ಲೂಕಿನ ಜಿ.ಬಿ.ಸರಗೂರು ಗ್ರಾಮದ ರೈತ ನಾಗೇಶ್ (೪೨) ಶುಂಠಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸುವಾಗ ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…