ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಹನೂರು ತಾಲ್ಲೂಕಿನ ಬೂದಬಾಳು ಗ್ರಾಮದ ಆಕಾಶ್, ಮನೋಜ್, ಶ್ರೀನಿವಾಸ್, ಕಾರ್ತಿಕ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.
ಘಟನೆ ವಿವರ: ಬೂದುಬಾಳು ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವ ಸಂಬಂಧ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಬೂದುಬಾಳು ಗ್ರಾಮದ ದೊಡ್ಡಕೆರೆಯವರೆಗೆ ಪಲ್ಲಕ್ಕಿ ಉತ್ಸವ ತರುವ ವೇಳೆ ಸಾಂಪ್ರದಾಯದಂತೆ ನಾನು ನನ್ನ ಅಣ್ಣ ಹಾಗೂ ಸ್ನೇಹಿತರು ಕುಣಿದುಕೊಂಡು ಬರುತ್ತಿದ್ದಾಗ ನಮ್ಮಗಳ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಂದು ಎಂಬುವವರು ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಬ್ ಇನ್ಸ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಅವರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…
ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…
ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ…