ಚಾಮರಾಜನಗರ

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬೆ ಹುಣಸೆ ಜಲಾಶಯಕ್ಕೂ ನೀರು ತುಂಬಿಸಿ ಈ ಭಾಗದ ರೈತರ ಹಲವು ವರ್ಷಗಳ ಕನಸು ನನಸು ಮಾಡಲು ಕ್ರಮ ವಹಿಸುವುದಾಗಿ ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

ತಾಲೂಕಿನ ಹುಬ್ಬೆ ಹುಣಸೆ ಜಲಾಶಯದ ಹೂಳೆತ್ತುವ ಕಾಮಗಾರಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಹುಬ್ಬೆ ಹುಣಸೆಯ ಜಲಾಶಯ ನಿರ್ಮಾಣವಾದ ಸಂದರ್ಭದಲ್ಲಿ ರೈತರ ಜಮೀನುಗಳನ್ನು ಪರಿಹಾರ ನೀಡಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಆದರೆ ನೀರಾವರಿ ಇಲಾಖೆಯ ಅಧಿಕಾರಿಗಳು ಗಡಿ ಗುರುತು ಮಾಡದೇ ಇರುವುದರಿಂದ ಹಾಗೂ ಸಮರ್ಪಕ ಮಳೆಯಾಗದೆ ಜಲಾಶಯ ಭರ್ತಿಯಾಗದೆ ಇರುವುದರಿಂದ ಪರಿಹಾರ ಪಡೆದುಕೊಂಡ ರೈತರು ತಮ್ಮ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿದ್ದರು. ಇದರಿಂದ ಮಳೆಗಾಲದ ಸಂದರ್ಭದಲ್ಲಿ ಹೆಚ್ಚಿನ ನೀರು ಶೇಖರಣೆ ಆಗುತ್ತಿರಲಿಲ್ಲ, ಈ ಸಂಬಂಧ ಜಲಾಶಯದ ಗಡಿ ಗುರುತು ಮಾಡಿ ಒತ್ತುವರಿ ತೆರವು ಮಾಡಲಾಗಿದೆ ಎಂದು ಹೇಳಿದರು.

ಇನ್ನು ಮೂರು ತಿಂಗಳೊಳಗೆ ಹುಬ್ಬೆ ಹುಣಸೆ ಜಲಾಶಯಕ್ಕೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಎಲ್ಲಾ ರೀತಿಯ ಕ್ರಮ ವಹಿಸಲಾಗಿದೆ. ಇದೀಗ ಹೆಚ್ಚಿನ ನೀರು ಶೇಖರಣೆ ಮಾಡುವ ನಿಟ್ಟಿನಲ್ಲಿ ಹೂಳು ತೆಗೆಸಲಾಗುತ್ತಿದೆ. ಕೆರೆಯಲ್ಲಿರುವ ಮಣ್ಣನ್ನು ಯಾರು ಬೇಕಾದರೂ ತೆಗೆದುಕೊಂಡು ಬಳಕೆ ಮಾಡಿಕೊಳ್ಳಬಹುದು. ಮಣ್ಣು ತೆಗೆಯುವ ವೇಳೆ ಯಾರಾದರೂ ತೊಂದರೆ ನೀಡಿದರೆ ಅಂತಹ ಅವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹನೂರು ವಿಧಾನಸಭಾ ಕ್ಷೇತ್ರದ ಗುಂಡಾಲ್ ಜಲಾಶಯ, ರಾಮನ ಗುಡ್ಡ, ಹುಬ್ಬೆ ಹುಣಸೆ ಸೇರಿದಂತೆ ಮೂರು ಜಲಾಶಯಗಳಿಗೆ ಈ ಹಿಂದೆ 138 ಕೋಟಿ ವೆಚ್ಚದಲ್ಲಿ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಗುಂಡಾಲ್ ಜಲಾಶಯಕ್ಕೆ ಮಾತ್ರ ಕಳೆದ ಎರಡು ವರ್ಷಗಳ ಹಿಂದೆಯೇ ನೀರು ತುಂಬಿಸಲಾಗಿತ್ತು. ಉಳಿದಂತೆ ರಾಮನ ಗುಡ್ಡ ಹಾಗೂ ಜಲಾಶಯಗಳಿಗೆ ನೀರು ತುಂಬಿಸಲು ಸಾಧ್ಯವಾಗದೆ ನೆನಗುದಿಗೆ ಬಿದ್ದಿತ್ತು. ಇದರಿಂದ ಈ ಭಾಗದ ರೈತರ ಕನಸು ಈಡೇರಲಿಲ್ಲ, ಕಳೆದ ಹಲವಾರು ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿತ್ತು. ಇದಲ್ಲದೆ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ನೂರಾರು ಟಿಎಂಸಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದ್ದರು ಈ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ, ಈ ಸಂಬಂಧ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ರಾಮನ ಗುಡ್ಡ ಚಲಾಯಿಸಿ ಕೇವಲ ಎರಡು ಕೋಟಿ ವೆಚ್ಚದಲ್ಲಿ ಅಳವಡಿಸಿ ನೀರು ತುಂಬಿಸಲಾಗಿದೆ. ಇದರಿಂದ ಸಾವಿರಾರು ಎಕರೆ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರು ಆರ್ಥಿಕವಾಗಿ ಸದೃಢರಾಗಲಿದ್ದಾರೆ ಎಂದು ಸಂತಷ ವ್ಯಕ್ತಪಡಿಸಿದರು.

ರಾಮನಗುಡ್ಡ ಜಲಾಶಯ ಬಹುತೇಕ ಭರ್ತಿಯಾಗಿರುವುದರಿಂದ ಹಳ್ಳದ ಮೂಲಕ ನೀರು ಹರಿಸಲಾಗುತ್ತಿದ್ದು ಚಿಂಚಳ್ಳಿ, ಮಣಗಳ್ಳಿ ಗ್ರಾಮದವರೆಗೆ ಇರುವ ಚೆಕ್ ಡ್ಯಾಂ ಭರ್ತಿಯಾಗಿದ್ದು ಅಂತರ್ಜಲ ಮಟ್ಟ ಹೆಚ್ಚಾಗಿರುವುದರಿಂದ ಜನಜಾನುವಾರುಗಳಿಗೆ ಅನುಕೂಲವಾಗಿದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದರು.

ಇದೇ ವೇಳೆ ಮಡಿವಾಳ ಸಮುದಾಯದ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್, ಮುಖಂಡರಾದ ಡಿ.ಕೆ ರಾಜು, ಉದ್ದನೂರು ಗಿರೀಶ್ ಜಿಕೆ, ಹೊಸೂರು ಪ್ರಮೋದ್, ಚಿನ್ನವೆಂಕಟ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

13 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

1 hour ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

3 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

3 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

3 hours ago

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ…

3 hours ago