ಚಾಮರಾಜನಗರ

ಕೇಂದ್ರ, ರಾಜ್ಯ ಸರ್ಕಾರಗಳು ಕಾಡಂಚಿನ ಗ್ರಾಮದ ಜನರ ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದೆ: ಬಡಗಲಪುರ ನಾಗೇಂದ್ರ ಆರೋಪ

ಹನೂರು: ಬಂಡವಾಳ ಶಾಹಿಗಳ ಪರವಾಗಿ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತು ತೆಗೆಯಲು ಅವಕಾಶ ಕಲ್ಪಿಸಿರುವ ಕೇಂದ್ರ, ರಾಜ್ಯ ಸರ್ಕಾರ ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ, ಇದನ್ನು ವಿರೋಧಿಸಿ ರಾಜ್ಯಾದ್ಯಂತ ರೈತ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಹನೂರು ತಾಲೂಕಿನ ಗಡಿ ಗ್ರಾಮವಾದ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ, ಪುದುಕಾಡು ಅಪ್ಪು ಕಾಂ ಪಟ್ಟಿ, ಆತೂರು ಗ್ರಾಮಗಳಲ್ಲಿ ನೂತನ ಗ್ರಾಮ ಘಟಕದ ನಾಮಫಲಕ ಉದ್ಘಾಟನೆ ಮಾಡಿ ನಂತರ ಅವರು ಮಾತನಾಡಿದರು .

ಬಂಡವಾಳ ಶಾಹಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿ ಒಂದು ಲಕ್ಷ ಎಕರೆ ಭೂಮಿಯನ್ನು ಖನಿಜ ಸಂಪತ್ತು ತೆಗೆಯಲು ಪ್ರತ್ಯೇಕ ಕಾಯಿದೆ, ಕಾನೂನು ತಂದು ಅವಕಾಶ ಕಲ್ಪಿಸಿದೆ. ಜೊತೆಗೆ ಸಂಡೂರು ಗ್ರಾಮದ ಜಿಂದಾಲ್ ಕಂಪನಿಗೆ ರೂ.3676 ಎಕರೆ ಜಮೀನು ಸಹ ಕಾಯ್ದೆ ಬದಲಾವಣೆ ಮಾಡಿ ಸರ್ಕಾರ ಬಂಡವಾಳ ಶಾಹಿಗಳಿಗೆ ಅವಕಾಶ ಕಲ್ಪಿಸಿದೆ.

ಆದರೆ ಕಾಡಂಚಿನ ಗ್ರಾಮಗಳ ನಿವಾಸಿಗಳು ನೂರಾರು ವರ್ಷಗಳಿಂದ ವಾಸ ಮಾಡುವ ಬಡ ರೈತ ಕುಟುಂಬಗಳಿಗೆ ಅರಣ್ಯದಂಚಿನ ಗ್ರಾಮಗಳ ಜನರನ್ನು ಒಕ್ಕಲೇಬ್ಬಿಸಲು ಈಗಾಗಲೇ ಎರಡು ನೋಟಿಸ್ ಜಾರಿಗೊಳಿಸಿದ್ದಾರೆ. ಮುಗ್ಧ ರೈತ ಕುಟುಂಬದವರಿಗೆ ಅರಣ್ಯ ಇಲಾಖೆ ಅಧಿಕಾರಿಗಳ ದಬ್ಬಾಳಿಕೆಯಿಂದ ಏನು ಮಾಡಲು ಸಾಧ್ಯವಿಲ್ಲ, ರಾಜ್ಯ ರೈತ ಸಂಘ ಹನೂರು ತಾಲೂಕಿನ ವಿವಿಧ ಗ್ರಾಮಗಳ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಈಗಾಗಲೇ ರೂಪುರೇಷೆಗಳನ್ನು ಸಿದ್ದ ಮಾಡಿಕೊಂಡಿದೆ. ಸ್ಥಳೀಯ ಶಾಸಕರು ಈ ಭಾಗದ ರೈತರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಗಡಿ ಗ್ರಾಮದಲ್ಲಿರುವ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಚಾಮರಾಜನಗರ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ ಸ್ವಾತಂತ್ರ್ಯ ಪೂರ್ವಕಾಲದಿಂದಲೂ ಇಲ್ಲಿನ ಜನತೆ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಅರಣ್ಯ ಇಲಾಖೆ ವಲಯಗಳನ್ನು ರೂಪಿಸಿಕೊಂಡು ಬಡ ಜನತೆಯನ್ನು ಒಕ್ಕಲೆಬ್ಬಿಸಲು ಕಾನೂನು ರೂಪಿಸುತ್ತಿದೆ. ಬಂಡವಾಳ ಶಾಹಿಗಳಿಗೆ ಕಾನೂನನ್ನು ಬದಲಾವಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತನ್ನು ಲೂಟಿ ಮಾಡಲು ಅವಕಾಶ ಕಲ್ಪಿಸುತ್ತಿದೆ. ಆದರೆ ಬಡ ರೈತರಿಗೆ ತೊಂದರೆ ನೀಡುತ್ತಿದ್ದಾರೆ. ಇನ್ನು ಮುಂದೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಜಿಲ್ಲೆಯ್ಯಾದ್ಯಾಂತ ಹೋರಾಟ ಕನ್ನಡ ಸುವ ಮೂಲಕ ನಮ್ಮ ಹಕ್ಕನ್ನು ಪಡೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

 

ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಗ್ರಾಮಗಳು ಅರಣ್ಯದಂಚಿನಲ್ಲೇ ಇರುವುದರಿಂದ ರೈತರು ಇಲ್ಲಿನ ಜನಸಾಮಾನ್ಯರು ಕಾಡುಪ್ರಾಣಿಗಳ ಹಾವಳಿಯಿಂದ ಈಗಾಗಲೇ ತತ್ತರಿಸಿದ್ದಾರೆ. ಜೊತೆಗೆ ಅರಣ್ಯ ಇಲಾಖೆ ಸಹ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಜನಸಾಮಾನ್ಯರ ಮೇಲೆ ಮಾಡುತ್ತಿರುವ ದಬ್ಬಾಳಿಕೆ ಬಗ್ಗೆ ಹಲವು ಹೋರಾಟಗಳನ್ನು ನಡೆಸಿದ್ದೇವೆ. ಇದೀಗ ಅರಣ್ಯ ಜಮೀನು ಬಿಟ್ಟು ಕೊಡುವಂತೆ ನೋಟಿಸ್ ನೀಡಿದ್ದಾರೆ, ಇದನ್ನು ಕರ್ನಾಟಕ ರಾಜ್ಯ ರೈತ ಸಂಘ ವಿರೋಧಿಸುತ್ತದೆ. ನೀವು ಸಹ ರೈತರ ಮಕ್ಕಳಾಗಿದ್ದರೆ ನಮ್ಮ ರೈತರಿಗೆ ಯಾವುದೇ ತೊಂದರೆ ಕೊಡಬೇಡಿ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯಧ್ಯಕ್ಷ ಶೈಲೇಂದ್ರ ಹನೂರು ತಾಲೂಕು ಘಟಕ, ಅಧ್ಯಕ್ಷ ಅಮ್ಜದ್ ಖಾನ್ ಗುಂಡ್ಲುಪೇಟೆ ಯುವ ಘಟಕದ ಅಧ್ಯಕ್ಷ ಭರತ್ ಹನೂರು ತಾಲೂಕು ಗೌರವಾಧ್ಯಕ್ಷ ರಾಜಣ್ಣ, ರೈತ ಮುಖಂಡರಾದ ಪಳನಿ ಸ್ವಾಮಿ, ವಸಂತ, ವೇಲು ಸ್ವಾಮಿ, ಸೂರ್ಯ, ರತ್ನವೇಲು, ವೆಂಕಟೇಶ್, ತಂಗವೇಲು ಸೇರಿದಂತೆ ಇನ್ನಿತರ ರೈತ ಮುಖಂಡರು ಉಪಸ್ಥಿತರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

48 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

2 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago