ಚಾಮರಾಜನಗರ

ಚಾ.ನಗರ | ಗೃಹಿಣಿ ಕೊಲೆ : ಪತಿ ಪೊಲೀಸ್ ವಶಕ್ಕೆ

ಚಾಮರಾಜನಗರ : ತಾಲ್ಲೂಕಿನ ದೊಳ್ಳೀಪುರ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಗೃಹಿಣಿಯನ್ನು ಆಯುಧದಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದ್ದು ಸೋಮವಾರ ಬೆಳಗಿನ ಜಾವ ವಿಚಾರ ಗೊತ್ತಾಗಿದೆ. ಆಕೆಯ ಗಂಡನೇ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಶೋಭಾ ಬಿ.ಆರ್. ಕೊಲೆಗೀಡಾದವರು. ತಲೆ, ಮುಖದ ಭಾಗಕ್ಕೆ ಆಯುಧದಿಂದ ಬಲವಾಗಿ ಹೊಡೆಯಲಾಗಿದೆ. ಶೋಭಾ ಅವರನ್ನು ಆಕೆಯ ಪತಿ ಮಹೇಶ (೪೫) ಕೊಲೆ ಮಾಡಿರುವುದಾಗಿ ಮೃತರ ಕಡೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.

ಶೋಭಾ ಮೂಲತಃ ಬೆಂಗಳೂರಿನವರು. ಮಹೇಶ ಮತ್ತು ಅವನ ತಾಯಿ ಭಾರತಿ ಸೇರಿ ಕೊಲೆ ಮಾಡಿರುವ ಅನುಮಾನದ ಮೇಲೆ ಠಾಣೆಗೆ ದೂರು ನೀಡಿದ್ದಾರೆ.

ಶೋಭಾ ಕೊಲೆಯಾಗಿದೆ ಎಂದು ಮಹೇಶನೇ ಬೆಳಿಗ್ಗೆ ಕರೆ ಮಾಡಿ ತಿಳಿಸಿದ. ಅವನು ಸಾಲ ಮಾಡಿಕೊಂಡಿದ್ದ. ತವರು ಮನೆಯಿಂದ ಹಣ ತರುವಂತೆ ಪದೇ ಪದೇ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರ ಪೂರ್ವ ಠಾಣೆ ಪೊಲೀಸರು ಮಹೇಶ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಮೃತರಿಗೆ ೧೬ವರ್ಷದ ಮಗ ಇದ್ದಾನೆ. ಅವನು ಹೊರ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಮೃತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ಘಟನಾ ಸ್ಥಳಕ್ಕೆ ಎಸ್ಪಿ ಡಾ.ಕವಿತಾ, ಎಎಸ್ಪಿ ಶಶಿಧರ್, ಡಿವೈಎಸ್ಪಿ ಲಕ್ಷ್ಮಯ್ಯ, ಇನ್ಸ್ ಪೆಕ್ಟರ್ ನವೀನ್, ಎಎಸ್‌ಐ ಮಹದೇವು ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು. ಘಟನೆ ಸಂಬಂಧ ವಿಚಾರಣೆ ಮುಂದುವರಿದಿದೆ.

ಆಂದೋಲನ ಡೆಸ್ಕ್

Recent Posts

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

1 hour ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

1 hour ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

1 hour ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

2 hours ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

4 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

4 hours ago