ಚಾಮರಾಜನಗರ

ಚಾ.ನಗರ | ಗೃಹಿಣಿ ಕೊಲೆ : ಪತಿ ಪೊಲೀಸ್ ವಶಕ್ಕೆ

ಚಾಮರಾಜನಗರ : ತಾಲ್ಲೂಕಿನ ದೊಳ್ಳೀಪುರ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಗೃಹಿಣಿಯನ್ನು ಆಯುಧದಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದ್ದು ಸೋಮವಾರ ಬೆಳಗಿನ ಜಾವ ವಿಚಾರ ಗೊತ್ತಾಗಿದೆ. ಆಕೆಯ ಗಂಡನೇ ಕೊಲೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಶೋಭಾ ಬಿ.ಆರ್. ಕೊಲೆಗೀಡಾದವರು. ತಲೆ, ಮುಖದ ಭಾಗಕ್ಕೆ ಆಯುಧದಿಂದ ಬಲವಾಗಿ ಹೊಡೆಯಲಾಗಿದೆ. ಶೋಭಾ ಅವರನ್ನು ಆಕೆಯ ಪತಿ ಮಹೇಶ (೪೫) ಕೊಲೆ ಮಾಡಿರುವುದಾಗಿ ಮೃತರ ಕಡೆಯವರು ಶಂಕೆ ವ್ಯಕ್ತಪಡಿಸಿದ್ದಾರೆ.

ಶೋಭಾ ಮೂಲತಃ ಬೆಂಗಳೂರಿನವರು. ಮಹೇಶ ಮತ್ತು ಅವನ ತಾಯಿ ಭಾರತಿ ಸೇರಿ ಕೊಲೆ ಮಾಡಿರುವ ಅನುಮಾನದ ಮೇಲೆ ಠಾಣೆಗೆ ದೂರು ನೀಡಿದ್ದಾರೆ.

ಶೋಭಾ ಕೊಲೆಯಾಗಿದೆ ಎಂದು ಮಹೇಶನೇ ಬೆಳಿಗ್ಗೆ ಕರೆ ಮಾಡಿ ತಿಳಿಸಿದ. ಅವನು ಸಾಲ ಮಾಡಿಕೊಂಡಿದ್ದ. ತವರು ಮನೆಯಿಂದ ಹಣ ತರುವಂತೆ ಪದೇ ಪದೇ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರ ಪೂರ್ವ ಠಾಣೆ ಪೊಲೀಸರು ಮಹೇಶ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಮೃತರಿಗೆ ೧೬ವರ್ಷದ ಮಗ ಇದ್ದಾನೆ. ಅವನು ಹೊರ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಮೃತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ಘಟನಾ ಸ್ಥಳಕ್ಕೆ ಎಸ್ಪಿ ಡಾ.ಕವಿತಾ, ಎಎಸ್ಪಿ ಶಶಿಧರ್, ಡಿವೈಎಸ್ಪಿ ಲಕ್ಷ್ಮಯ್ಯ, ಇನ್ಸ್ ಪೆಕ್ಟರ್ ನವೀನ್, ಎಎಸ್‌ಐ ಮಹದೇವು ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು. ಘಟನೆ ಸಂಬಂಧ ವಿಚಾರಣೆ ಮುಂದುವರಿದಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago