ಗುಣಮಟ್ಟ ಪರೀಕ್ಷೆ ವರದಿ ನೀಡಲು ೪,೫೦೦ ರೂ. ಪಡೆಯುವಾಗ ಬಂಧನ
ಚಾಮರಾಜನಗರ: ಎಂ-ಸ್ಯಾಂಡ್ ಗುಣಮಟ್ಟ ವರದಿ ನೀಡಲು ೪,೫೦೦ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ಇಲ್ಲಿನ ಲೋಕೋಪಯೋಗಿ ಇಲಾಖೆ ನೌಕರ(ಹೊರಗುತ್ತಿಗೆ) ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಗುಣ ಭರವಸೆ ಉಪವಿಭಾಗದ ತಾಂತ್ರಿಕ ಸಹಾಯಕ (ಟೆಕ್ನಿಕಲ್ ಅಸಿಸ್ಟೆಂಟ್) ನಂದರಾಜು ಲಂಚ ಪಡೆಯುವಾಗ
ಸಿಕ್ಕಿಬಿದ್ದವರು.
ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಪ್ರಸನ್ನ ಅವರಿಂದ ಮಧ್ಯಾಹ್ನ ೩.೪೫ರಲ್ಲಿ ಹಣ ಪಡೆಯುವಾಗ ದಾಳಿಗೆ ಒಳಗಾದರು.
ಪ್ರಸನ್ನ ಅವರು ಗುತ್ತಿಗೆ ಆಧಾರದಲ್ಲಿ ಎಂ-ಸ್ಯಾಂಡ್ ಕ್ರಷರ್ ಘಟಕ ನಡೆಸುತ್ತಿದ್ದು, ಎಂ-ಸ್ಯಾಂಡ್ (ಮರಳು) ಮಾರಾಟ ಮಾಡಲು ಅದರ ಗುಣಮಟ್ಟ ಪರೀಕ್ಷೆ ವರದಿಯನ್ನು ಇಲಾಖೆಯಿಂದ ಕಡ್ಡಾಯವಾಗಿ ಪಡೆಯಬೇಕಿದೆ.
ಈ ವರದಿ ನೀಡಲು ಸತಾಯಿಸಿದ ನಂದರಾಜು ಏತನ್ಮಧ್ಯೆ ೫,೫೦೦ರೂ.ಗೆ ಬೇಡಿಕೆ ಇಟ್ಟಾಗ ಮುಂಗಡವಾಗಿ ೧ ಸಾವಿರ ರೂ. ನೀಡಿದ್ದರು. ಉಳಿದ ೪,೫೦೦ ರೂ.ಅನ್ನು ಪ್ರಸನ್ನ ಅವರಿಂದ ಮಧ್ಯಾಹ್ನ ೩.೪೫ರಲ್ಲಿ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದರು.
ಲೋಕಾಯುಕ್ತ ಎಸ್ಪಿ ಉದೇಶ್, ಡಿವೈಎಸ್ಪಿ ಕೆ.ಟಿ.ಮ್ಯಾಥ್ಯೂಥಾಮಸ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್, ಮುಖ್ಯಪೇದೆ ಮನೋರಂಜನ್, ಪೇದೆಗಳಾದ ಗುರುಪ್ರಸಾದ್, ಶ್ರೀನಿವಾಸ್ ಈ ದಾಳಿ ನಡೆಸಿದರು.
ವಿಚಾರಣೆ ಮುಂದುವರಿದಿದ್ದು ಆರೋಪಿ ನಂದರಾಜು ಅವರನ್ನು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು.
ಲಂಚದ ೪,೫೦೦ ರೂ.ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ‘ಆಂದೋಲನಕ್ಕೆ’ ತಿಳಿಸಿದರು.
ಲಂಚಕ್ಕೆ ಬೇಡಿಕೆ ಇಟ್ಟಿರುವ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು.
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…