ಚಾಮರಾಜನಗರ

ಚಾ.ನಗರ | PWD ತಾಂತ್ರಿಕ ಸಹಾಯಕ ಲೋಕಾಯುಕ್ತ ಬಲೆಗೆ

ಗುಣಮಟ್ಟ ಪರೀಕ್ಷೆ ವರದಿ ನೀಡಲು ೪,೫೦೦ ರೂ. ಪಡೆಯುವಾಗ ಬಂಧನ
ಚಾಮರಾಜನಗರ: ಎಂ-ಸ್ಯಾಂಡ್ ಗುಣಮಟ್ಟ ವರದಿ ನೀಡಲು ೪,೫೦೦ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ಇಲ್ಲಿನ ಲೋಕೋಪಯೋಗಿ ಇಲಾಖೆ ನೌಕರ(ಹೊರಗುತ್ತಿಗೆ) ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಗುಣ ಭರವಸೆ ಉಪವಿಭಾಗದ ತಾಂತ್ರಿಕ ಸಹಾಯಕ (ಟೆಕ್ನಿಕಲ್ ಅಸಿಸ್ಟೆಂಟ್) ನಂದರಾಜು ಲಂಚ ಪಡೆಯುವಾಗ
ಸಿಕ್ಕಿಬಿದ್ದವರು.

ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಪ್ರಸನ್ನ ಅವರಿಂದ ಮಧ್ಯಾಹ್ನ ೩.೪೫ರಲ್ಲಿ ಹಣ ಪಡೆಯುವಾಗ ದಾಳಿಗೆ ಒಳಗಾದರು.
ಪ್ರಸನ್ನ ಅವರು ಗುತ್ತಿಗೆ ಆಧಾರದಲ್ಲಿ ಎಂ-ಸ್ಯಾಂಡ್ ಕ್ರಷರ್ ಘಟಕ ನಡೆಸುತ್ತಿದ್ದು, ಎಂ-ಸ್ಯಾಂಡ್ (ಮರಳು) ಮಾರಾಟ ಮಾಡಲು ಅದರ ಗುಣಮಟ್ಟ ಪರೀಕ್ಷೆ ವರದಿಯನ್ನು ಇಲಾಖೆಯಿಂದ ಕಡ್ಡಾಯವಾಗಿ ಪಡೆಯಬೇಕಿದೆ.

ಈ ವರದಿ ನೀಡಲು ಸತಾಯಿಸಿದ ನಂದರಾಜು ಏತನ್ಮಧ್ಯೆ ೫,೫೦೦ರೂ.ಗೆ ಬೇಡಿಕೆ ಇಟ್ಟಾಗ ಮುಂಗಡವಾಗಿ ೧ ಸಾವಿರ ರೂ. ನೀಡಿದ್ದರು. ಉಳಿದ ೪,೫೦೦ ರೂ.ಅನ್ನು ಪ್ರಸನ್ನ ಅವರಿಂದ ಮಧ್ಯಾಹ್ನ ೩.೪೫ರಲ್ಲಿ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದರು.

ಲೋಕಾಯುಕ್ತ ಎಸ್ಪಿ ಉದೇಶ್, ಡಿವೈಎಸ್ಪಿ ಕೆ.ಟಿ.ಮ್ಯಾಥ್ಯೂಥಾಮಸ್ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಲೋಹಿತ್ ಕುಮಾರ್, ಮುಖ್ಯಪೇದೆ ಮನೋರಂಜನ್, ಪೇದೆಗಳಾದ ಗುರುಪ್ರಸಾದ್, ಶ್ರೀನಿವಾಸ್ ಈ ದಾಳಿ ನಡೆಸಿದರು.

ವಿಚಾರಣೆ ಮುಂದುವರಿದಿದ್ದು ಆರೋಪಿ ನಂದರಾಜು ಅವರನ್ನು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು.
ಲಂಚದ ೪,೫೦೦ ರೂ.ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ‘ಆಂದೋಲನಕ್ಕೆ’ ತಿಳಿಸಿದರು.

ಲಂಚಕ್ಕೆ ಬೇಡಿಕೆ ಇಟ್ಟಿರುವ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

1 hour ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

1 hour ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

2 hours ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

2 hours ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

3 hours ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

3 hours ago