ಗುಣಮಟ್ಟ ಪರೀಕ್ಷೆ ವರದಿ ನೀಡಲು ೪,೫೦೦ ರೂ. ಪಡೆಯುವಾಗ ಬಂಧನ
ಚಾಮರಾಜನಗರ: ಎಂ-ಸ್ಯಾಂಡ್ ಗುಣಮಟ್ಟ ವರದಿ ನೀಡಲು ೪,೫೦೦ ರೂ. ಲಂಚ ಸ್ವೀಕಾರ ಮಾಡುತ್ತಿದ್ದ ಇಲ್ಲಿನ ಲೋಕೋಪಯೋಗಿ ಇಲಾಖೆ ನೌಕರ(ಹೊರಗುತ್ತಿಗೆ) ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಗುಣ ಭರವಸೆ ಉಪವಿಭಾಗದ ತಾಂತ್ರಿಕ ಸಹಾಯಕ (ಟೆಕ್ನಿಕಲ್ ಅಸಿಸ್ಟೆಂಟ್) ನಂದರಾಜು ಲಂಚ ಪಡೆಯುವಾಗ
ಸಿಕ್ಕಿಬಿದ್ದವರು.
ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಪ್ರಸನ್ನ ಅವರಿಂದ ಮಧ್ಯಾಹ್ನ ೩.೪೫ರಲ್ಲಿ ಹಣ ಪಡೆಯುವಾಗ ದಾಳಿಗೆ ಒಳಗಾದರು.
ಪ್ರಸನ್ನ ಅವರು ಗುತ್ತಿಗೆ ಆಧಾರದಲ್ಲಿ ಎಂ-ಸ್ಯಾಂಡ್ ಕ್ರಷರ್ ಘಟಕ ನಡೆಸುತ್ತಿದ್ದು, ಎಂ-ಸ್ಯಾಂಡ್ (ಮರಳು) ಮಾರಾಟ ಮಾಡಲು ಅದರ ಗುಣಮಟ್ಟ ಪರೀಕ್ಷೆ ವರದಿಯನ್ನು ಇಲಾಖೆಯಿಂದ ಕಡ್ಡಾಯವಾಗಿ ಪಡೆಯಬೇಕಿದೆ.
ಈ ವರದಿ ನೀಡಲು ಸತಾಯಿಸಿದ ನಂದರಾಜು ಏತನ್ಮಧ್ಯೆ ೫,೫೦೦ರೂ.ಗೆ ಬೇಡಿಕೆ ಇಟ್ಟಾಗ ಮುಂಗಡವಾಗಿ ೧ ಸಾವಿರ ರೂ. ನೀಡಿದ್ದರು. ಉಳಿದ ೪,೫೦೦ ರೂ.ಅನ್ನು ಪ್ರಸನ್ನ ಅವರಿಂದ ಮಧ್ಯಾಹ್ನ ೩.೪೫ರಲ್ಲಿ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದರು.
ಲೋಕಾಯುಕ್ತ ಎಸ್ಪಿ ಉದೇಶ್, ಡಿವೈಎಸ್ಪಿ ಕೆ.ಟಿ.ಮ್ಯಾಥ್ಯೂಥಾಮಸ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್, ಮುಖ್ಯಪೇದೆ ಮನೋರಂಜನ್, ಪೇದೆಗಳಾದ ಗುರುಪ್ರಸಾದ್, ಶ್ರೀನಿವಾಸ್ ಈ ದಾಳಿ ನಡೆಸಿದರು.
ವಿಚಾರಣೆ ಮುಂದುವರಿದಿದ್ದು ಆರೋಪಿ ನಂದರಾಜು ಅವರನ್ನು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು.
ಲಂಚದ ೪,೫೦೦ ರೂ.ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ‘ಆಂದೋಲನಕ್ಕೆ’ ತಿಳಿಸಿದರು.
ಲಂಚಕ್ಕೆ ಬೇಡಿಕೆ ಇಟ್ಟಿರುವ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…