ಚಾಮರಾಜನಗರ

ಚಾ.ನಗರ | ಬುದ್ದನ ವಿಗ್ರಹ ಒಡೆದು,ಅಂಬೇಡ್ಕರ್‌ ನಾಮಫಲಕ ಕಿತ್ತು ವಿರೂಪ

ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೋಡನಪುರ ಗ್ರಾಮದಲ್ಲಿ ಕಿಡಿಗೇಡಿಗಳು ಬುದ್ಧನ ವಿಗ್ರಹವನ್ನು ಒಡೆದು ಹಾಕಿ, ಡಾ ಬಿಆರ್ ಅಂಬೇಡ್ಕರ್ ನಾಮಫಲಕವನ್ನು ಕಿತ್ತು ವಿರೂಪಗೊಳಿಸಿದ ಘಟನೆ ನಡೆದಿದೆ.

ಜ್ಯೋತಿಗೌಡನಪುರ ಗ್ರಾಮದ ಗುಡಿಯೊಳಗಿಂದ ಬುದ್ಧನ ವಿಗ್ರಹವನ್ನು ಹೊರತಂದು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೆ, ಗ್ರಾಮದ ಪ್ರಮುಖ ಸ್ಥಳದಲ್ಲಿದ್ದ ಅಂಬೇಡ್ಕರ್ ನಾಮಫಲಕವನ್ನು ಹರಿದು, ಬರಹವನ್ನು ಅಳಿಸಿ ವಿಕೃತಗೊಳಿಸಿದ್ದಾರೆ. ಈ ದುಷ್ಕೃತ್ಯ ರಾತ್ರಿಯ ಸಮಯದಲ್ಲಿ ನಡೆದಿರಬಹುದು ಎಂದು ಊಹಿಸಲಾಗಿದೆ. ಸುದ್ದಿ ತಿಳಿದ ತಕ್ಷಣ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿಟಿ ಕವಿತಾ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದರು. ಘಟನಾ ಸ್ಥಳವನ್ನು ಪರಿಶೀಲಿಸಿ, ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಗಳು, ಸ್ಥಳೀಯರ ಮಾಹಿತಿ ಆಧಾರದ ಮೇಲೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಗ್ರಾಮಸ್ಥರು ಆಕ್ರೋಶ
ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶಾಂತಿ ಕಾಪಾಡಲು ಪೊಲೀಸ್ ಬಂದೋಬಸ್ತ್ ಜಾರಿಗೊಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

10 mins ago

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

25 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

56 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

3 hours ago