ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೋಡನಪುರ ಗ್ರಾಮದಲ್ಲಿ ಕಿಡಿಗೇಡಿಗಳು ಬುದ್ಧನ ವಿಗ್ರಹವನ್ನು ಒಡೆದು ಹಾಕಿ, ಡಾ ಬಿಆರ್ ಅಂಬೇಡ್ಕರ್ ನಾಮಫಲಕವನ್ನು ಕಿತ್ತು ವಿರೂಪಗೊಳಿಸಿದ ಘಟನೆ ನಡೆದಿದೆ.
ಜ್ಯೋತಿಗೌಡನಪುರ ಗ್ರಾಮದ ಗುಡಿಯೊಳಗಿಂದ ಬುದ್ಧನ ವಿಗ್ರಹವನ್ನು ಹೊರತಂದು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೆ, ಗ್ರಾಮದ ಪ್ರಮುಖ ಸ್ಥಳದಲ್ಲಿದ್ದ ಅಂಬೇಡ್ಕರ್ ನಾಮಫಲಕವನ್ನು ಹರಿದು, ಬರಹವನ್ನು ಅಳಿಸಿ ವಿಕೃತಗೊಳಿಸಿದ್ದಾರೆ. ಈ ದುಷ್ಕೃತ್ಯ ರಾತ್ರಿಯ ಸಮಯದಲ್ಲಿ ನಡೆದಿರಬಹುದು ಎಂದು ಊಹಿಸಲಾಗಿದೆ. ಸುದ್ದಿ ತಿಳಿದ ತಕ್ಷಣ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿಟಿ ಕವಿತಾ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದರು. ಘಟನಾ ಸ್ಥಳವನ್ನು ಪರಿಶೀಲಿಸಿ, ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಗಳು, ಸ್ಥಳೀಯರ ಮಾಹಿತಿ ಆಧಾರದ ಮೇಲೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಗ್ರಾಮಸ್ಥರು ಆಕ್ರೋಶ
ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶಾಂತಿ ಕಾಪಾಡಲು ಪೊಲೀಸ್ ಬಂದೋಬಸ್ತ್ ಜಾರಿಗೊಳಿಸಲಾಗಿದೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…