ಚಾಮರಾಜನಗರ : ತಾಲ್ಲೂಕಿನ ಜ್ಯೋತಿಗೋಡನಪುರ ಗ್ರಾಮದಲ್ಲಿ ಕಿಡಿಗೇಡಿಗಳು ಬುದ್ಧನ ವಿಗ್ರಹವನ್ನು ಒಡೆದು ಹಾಕಿ, ಡಾ ಬಿಆರ್ ಅಂಬೇಡ್ಕರ್ ನಾಮಫಲಕವನ್ನು ಕಿತ್ತು ವಿರೂಪಗೊಳಿಸಿದ ಘಟನೆ ನಡೆದಿದೆ.
ಜ್ಯೋತಿಗೌಡನಪುರ ಗ್ರಾಮದ ಗುಡಿಯೊಳಗಿಂದ ಬುದ್ಧನ ವಿಗ್ರಹವನ್ನು ಹೊರತಂದು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೆ, ಗ್ರಾಮದ ಪ್ರಮುಖ ಸ್ಥಳದಲ್ಲಿದ್ದ ಅಂಬೇಡ್ಕರ್ ನಾಮಫಲಕವನ್ನು ಹರಿದು, ಬರಹವನ್ನು ಅಳಿಸಿ ವಿಕೃತಗೊಳಿಸಿದ್ದಾರೆ. ಈ ದುಷ್ಕೃತ್ಯ ರಾತ್ರಿಯ ಸಮಯದಲ್ಲಿ ನಡೆದಿರಬಹುದು ಎಂದು ಊಹಿಸಲಾಗಿದೆ. ಸುದ್ದಿ ತಿಳಿದ ತಕ್ಷಣ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿಟಿ ಕವಿತಾ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದರು. ಘಟನಾ ಸ್ಥಳವನ್ನು ಪರಿಶೀಲಿಸಿ, ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ. ಸಿಸಿಟಿವಿ ದೃಶ್ಯಗಳು, ಸ್ಥಳೀಯರ ಮಾಹಿತಿ ಆಧಾರದ ಮೇಲೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಗ್ರಾಮಸ್ಥರು ಆಕ್ರೋಶ
ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶಾಂತಿ ಕಾಪಾಡಲು ಪೊಲೀಸ್ ಬಂದೋಬಸ್ತ್ ಜಾರಿಗೊಳಿಸಲಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…