ಚಾಮರಾಜನಗರ

ಚಾ.ನಗರ ದಸರಾ ಸಾಂಸ್ಕೃತಿಕ ಮಹೋತ್ಸವಕ್ಕೆ ಚಾಲನೆ ; ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ

ಚಾಮರಾಜನಗರ : ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ನಗರದಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾತಂಡಗಳ ಮೆರವಣಿಗೆಗೆ ಸೋಮವಾರ ಚಾಲನೆ ನೀಡಲಾಯಿತು.

ನಗರದಲ್ಲಿ ಪ್ರತಿ ವರ್ಷ ರಾಜ್ಯ ಸರ್ಕಾರ ನಡೆಸುತ್ತಿದ್ದ ಚಾಮರಾಜನಗರ ಸಾಂಸ್ಕೃತಿಕ ದಸರಾವನ್ನು ಈ ಬಾರಿ ವಿವಿಧ ಕಾರಣಗಳಿಂದ ರದ್ದುಗೊಂಡಿದೆ. ಈ ಹಿನ್ನೆಲೆಯಲ್ಲಿ ದಸರಾ ಪರಂಪರೆ ಇಲ್ಲಿಗೆ ನಿಲ್ಲಬಾರದು ಎಂಬ ದೃಷ್ಟಿಯಿಂದ ಬಳಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕಲಾತಂಡಗಳ ಮೆರವಣಿಗೆಗೆ ಹಸಿರು ನಿಶಾನೆ ತೋರಿದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ನಗರದಲ್ಲಿ ಈ ಬಾರಿ ರಾಜ್ಯ ಸರ್ಕಾರ ದಸರಾ ಹಮ್ಮಿಕೊಳ್ಳದೆ ಇರುವುದರಿಂದ ಕಲಾವಿದರೆ ಸ್ವಯಂಪ್ರೇರಿತರಾಗಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದೆ. ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ ಎಂದರು.

ಮುಂದಿನ ವರ್ಷ ಜಿಲ್ಲೆಯಲ್ಲಿ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸಲು ಸ್ಥಳೀಯ ಶಾಸಕರು, ಜಾನಪದ ಕಲಾವಿದರ ಜತೆ ಚರ್ಚಿಸಿ, ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ:-ಮಂಡ್ಯ | ಕೆರೆಗಳಿಗೆ ಒಳಹರಿವಿನ ತೊಂದರೆಯಿದ್ದಲ್ಲಿ ಪರಿಹರಿಸಿ : ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ

ಇದೇ ವೇಳೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರು ಮೆರವಣಿಗೆಗೆ ಚಾಲನೆ ನೀಡಿ, ಕಲಾವಿದರಿಗೆ ಶುಭ ಹಾರೈಸಿದರು.

ಮೆರವಣಿಗೆಯಲ್ಲಿ ಸತ್ತಿಗೆ ಸೂರಿಪಾಣಿ, ಡೊಳ್ಳು ಕುಣಿತ, ವೀರಗಾಸೆ, ನಾದಸ್ವರ, ಬೀಸು ಕಂಸಾಳೆ, ಸೋಬಾನೆ ಕಲಾವಿದರ ತಂಡಗಳು, ಮಂಟೇಸ್ವಾಮಿ ಕಂಡಾಯ, ನೀಲಗಾರ ಕಲಾವಿದರು ಭಾಗವಹಿಸಿದ್ದರು.

ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಹೊರಟ ಮೆರವಣಿಗೆ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮುಖಾಂತರ ಜಿಲ್ಲಾಡಳಿತ ಭವನವನ್ನು ತಲುಪಿ, ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಮಾವೇಶಗೊಂಡಿತು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago