ಚಾಮರಾಜನಗರ

ಚಾ.ನಗರ ದಸರಾ ಸಾಂಸ್ಕೃತಿಕ ಮಹೋತ್ಸವಕ್ಕೆ ಚಾಲನೆ ; ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ

ಚಾಮರಾಜನಗರ : ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ನಗರದಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾತಂಡಗಳ ಮೆರವಣಿಗೆಗೆ ಸೋಮವಾರ ಚಾಲನೆ ನೀಡಲಾಯಿತು.

ನಗರದಲ್ಲಿ ಪ್ರತಿ ವರ್ಷ ರಾಜ್ಯ ಸರ್ಕಾರ ನಡೆಸುತ್ತಿದ್ದ ಚಾಮರಾಜನಗರ ಸಾಂಸ್ಕೃತಿಕ ದಸರಾವನ್ನು ಈ ಬಾರಿ ವಿವಿಧ ಕಾರಣಗಳಿಂದ ರದ್ದುಗೊಂಡಿದೆ. ಈ ಹಿನ್ನೆಲೆಯಲ್ಲಿ ದಸರಾ ಪರಂಪರೆ ಇಲ್ಲಿಗೆ ನಿಲ್ಲಬಾರದು ಎಂಬ ದೃಷ್ಟಿಯಿಂದ ಬಳಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕಲಾತಂಡಗಳ ಮೆರವಣಿಗೆಗೆ ಹಸಿರು ನಿಶಾನೆ ತೋರಿದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ನಗರದಲ್ಲಿ ಈ ಬಾರಿ ರಾಜ್ಯ ಸರ್ಕಾರ ದಸರಾ ಹಮ್ಮಿಕೊಳ್ಳದೆ ಇರುವುದರಿಂದ ಕಲಾವಿದರೆ ಸ್ವಯಂಪ್ರೇರಿತರಾಗಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದೆ. ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ ಎಂದರು.

ಮುಂದಿನ ವರ್ಷ ಜಿಲ್ಲೆಯಲ್ಲಿ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸಲು ಸ್ಥಳೀಯ ಶಾಸಕರು, ಜಾನಪದ ಕಲಾವಿದರ ಜತೆ ಚರ್ಚಿಸಿ, ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ:-ಮಂಡ್ಯ | ಕೆರೆಗಳಿಗೆ ಒಳಹರಿವಿನ ತೊಂದರೆಯಿದ್ದಲ್ಲಿ ಪರಿಹರಿಸಿ : ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ

ಇದೇ ವೇಳೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರು ಮೆರವಣಿಗೆಗೆ ಚಾಲನೆ ನೀಡಿ, ಕಲಾವಿದರಿಗೆ ಶುಭ ಹಾರೈಸಿದರು.

ಮೆರವಣಿಗೆಯಲ್ಲಿ ಸತ್ತಿಗೆ ಸೂರಿಪಾಣಿ, ಡೊಳ್ಳು ಕುಣಿತ, ವೀರಗಾಸೆ, ನಾದಸ್ವರ, ಬೀಸು ಕಂಸಾಳೆ, ಸೋಬಾನೆ ಕಲಾವಿದರ ತಂಡಗಳು, ಮಂಟೇಸ್ವಾಮಿ ಕಂಡಾಯ, ನೀಲಗಾರ ಕಲಾವಿದರು ಭಾಗವಹಿಸಿದ್ದರು.

ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಹೊರಟ ಮೆರವಣಿಗೆ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮುಖಾಂತರ ಜಿಲ್ಲಾಡಳಿತ ಭವನವನ್ನು ತಲುಪಿ, ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಮಾವೇಶಗೊಂಡಿತು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

3 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

4 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

8 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

10 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

10 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

12 hours ago