ಚಾಮರಾಜನಗರ

ಚಾ.ನಗರ | ಇತಿಹಾಸ ಅರಿಯದವರಿಂದ ದಸರಾ ರದ್ದು ; ಸಾಹಿತಿ ಸೋಮಶೇಖರ್‌ ಬಿಸಲ್ವಾಡಿ

ಚಾಮರಾಜನಗರ : ನಗರದಲ್ಲಿ ೨೦೧೩ರಿಂದ ಆರಂಭವಾದ ಚಾಮರಾಜನಗರ ಸಾಂಸ್ಕೃತಿಕ ದಸರಾ ೨೦೨೪ರವರೆಗೂ ನಡೆಯಿತು. ಈ ಬಾರಿ ದಸರಾ ರದ್ದಾಗಿರುವುದು ಆಡಳಿತ ವರ್ಗಕ್ಕೆ ಚಾಮರಾಜನಗರದ ಇತಿಹಾಸದ ಅರಿವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಾಹಿತಿ ಸೋಮಶೇಖರ್ ಬಿಸಲ್ವಾಡಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ೨ ದಿನಗಳ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಆಶಯ ನುಡಿಗಳನ್ನಾಡಿದರು.

ಚಾಮರಾಜನಗರದಲ್ಲಿ ಹಿಂದೆ ದಸರಾ ನಡೆದಿತ್ತೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಅವರು ಚಾಮರಾಜನಗರ ದಸರಾ ಕಾರ್ಯಕ್ರಮ ರದ್ದುಪಡಿಸಿ, ಜಿಲ್ಲೆಗೆ ಅಪಚಾರ ಮಾಡಿದ್ದಾರೆ ಎಂದರು.

ಕಲಾವಿದರಾದ ನಾವು ಒಟ್ಟಾಗಿ ಚಾಮರಾಜನಗರ ದಸರಾ ಆಚರಿಸೋಣ ಎಂಬ ಸಂಕಲ್ಪ ಮಾಡಿರುವುದು ಪ್ರಶಂಸನೀಯ. ಕಲಾವಿದರೇ ಸ್ವಯಂಪ್ರೇರಿತವಾಗಿ ದಸರಾ ಆಚರಿಸುತ್ತಿರುವುದು ಸರ್ಕಾರಕ್ಕೆ ಕೊಟ್ಟ ಸಂದೇಶವಾಗಿದೆ ಎಂದರು.

ಇದನ್ನೂ ಓದಿ:-ಚಾ.ನಗರ ದಸರಾ ಸಾಂಸ್ಕೃತಿಕ ಮಹೋತ್ಸವಕ್ಕೆ ಚಾಲನೆ ; ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ

ಜಿಲ್ಲಾ ಯುವ ಕಲಾವಿದರ ಬಳಗದ ಅಧ್ಯಕ್ಷ ಶಿವಶಂಕರ್ ಎನ್.ಚಟ್ಟು ಮಾತನಾಡಿದರು. ವೇದಿಕೆಯಲ್ಲಿ ತಿಂಗಾಳು ಮುಳುಗಿದವೋ ರಂಗೋಲಿ ಬೆಳಗಿದವೋ ಎಂಬ ಮಲೆ ಮಹದೇಶ್ವರರ ಭಕ್ತಿಗೀತೆಯನ್ನು ಸಾಮೂಹಿಕವಾಗಿ ಹಾಡಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಕ್ತಿ ಗೀತೆ, ಜಾನಪದ ಗೀತೆ, ಸುಗಮ ಸಂಗೀತ, ಕುಂಚ ಗಾಯನ, ನೀಲಗಾರರ ಪದ, ಸೋಬಾನೆ, ತಂಬೂರಿ ಪದ, ಚಲನಚಿತ್ರ ಗೀತೆಗಳು, ರಂಗ ಗೀತೆಗಳು, ಹೋರಾಟ ಗೀತೆಗಳು, ಹಾಸ್ಯ ಜಾನಪದ, ಭಜನೆ, ವೀರಗಾಸೆ, ಹರಿಕಥೆ, ಗೊರವರ ಕುಣಿತ, ಡೊಳ್ಳು ಕುಣಿತ, ಸ್ಯಾಕ್ರೋಪೋನ್ ವಾದನ, ತತ್ವಪದ, ಭರತನಾಟ್ಯ, ನೃತ್ಯ, ಶಿವತಾಂಡವ ನೃತ್ಯ ನಾಟಕ ಕಲಾ ಪ್ರಕಾರಗಳಿಗೆ ಸಂಬಂಽಸಿದ ಕಲಾ ಪ್ರದರ್ಶನಗಳು ಜರುಗಿದವು.
ವೇದಿಕೆಯಲ್ಲಿ ಕಲಾವಿದ ಮಂಗಲ ಶಿವಣ್ಣ, ಕನ್ನಡಪರ ಸಂಘಟನೆ ಮುಖಂಡ ಚಾ.ರಂ.ಶ್ರೀನಿವಾಸಗೌಡ, ವೇಣುಗೋಪಾಲ್, ಯುವ ಕಲಾವಿದರಾದ ಸಿದ್ದರಾಜು, ಮಂಜು ಶ್ರೀರಾಂ, ದಡದಹಳ್ಳಿ ರಮೇಶ್, ರಾಕ್‌ಗಿರೀಶ್, ಆಲೂರು ದೊರೆಸ್ವಾಮಿ ಜಾನಪದ ಕಲಾವಿದರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago