ಚಾಮರಾಜನಗರ

ಚಾ.ನಗರ | ಇತಿಹಾಸ ಅರಿಯದವರಿಂದ ದಸರಾ ರದ್ದು ; ಸಾಹಿತಿ ಸೋಮಶೇಖರ್‌ ಬಿಸಲ್ವಾಡಿ

ಚಾಮರಾಜನಗರ : ನಗರದಲ್ಲಿ ೨೦೧೩ರಿಂದ ಆರಂಭವಾದ ಚಾಮರಾಜನಗರ ಸಾಂಸ್ಕೃತಿಕ ದಸರಾ ೨೦೨೪ರವರೆಗೂ ನಡೆಯಿತು. ಈ ಬಾರಿ ದಸರಾ ರದ್ದಾಗಿರುವುದು ಆಡಳಿತ ವರ್ಗಕ್ಕೆ ಚಾಮರಾಜನಗರದ ಇತಿಹಾಸದ ಅರಿವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಾಹಿತಿ ಸೋಮಶೇಖರ್ ಬಿಸಲ್ವಾಡಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ೨ ದಿನಗಳ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಆಶಯ ನುಡಿಗಳನ್ನಾಡಿದರು.

ಚಾಮರಾಜನಗರದಲ್ಲಿ ಹಿಂದೆ ದಸರಾ ನಡೆದಿತ್ತೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಅವರು ಚಾಮರಾಜನಗರ ದಸರಾ ಕಾರ್ಯಕ್ರಮ ರದ್ದುಪಡಿಸಿ, ಜಿಲ್ಲೆಗೆ ಅಪಚಾರ ಮಾಡಿದ್ದಾರೆ ಎಂದರು.

ಕಲಾವಿದರಾದ ನಾವು ಒಟ್ಟಾಗಿ ಚಾಮರಾಜನಗರ ದಸರಾ ಆಚರಿಸೋಣ ಎಂಬ ಸಂಕಲ್ಪ ಮಾಡಿರುವುದು ಪ್ರಶಂಸನೀಯ. ಕಲಾವಿದರೇ ಸ್ವಯಂಪ್ರೇರಿತವಾಗಿ ದಸರಾ ಆಚರಿಸುತ್ತಿರುವುದು ಸರ್ಕಾರಕ್ಕೆ ಕೊಟ್ಟ ಸಂದೇಶವಾಗಿದೆ ಎಂದರು.

ಇದನ್ನೂ ಓದಿ:-ಚಾ.ನಗರ ದಸರಾ ಸಾಂಸ್ಕೃತಿಕ ಮಹೋತ್ಸವಕ್ಕೆ ಚಾಲನೆ ; ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ

ಜಿಲ್ಲಾ ಯುವ ಕಲಾವಿದರ ಬಳಗದ ಅಧ್ಯಕ್ಷ ಶಿವಶಂಕರ್ ಎನ್.ಚಟ್ಟು ಮಾತನಾಡಿದರು. ವೇದಿಕೆಯಲ್ಲಿ ತಿಂಗಾಳು ಮುಳುಗಿದವೋ ರಂಗೋಲಿ ಬೆಳಗಿದವೋ ಎಂಬ ಮಲೆ ಮಹದೇಶ್ವರರ ಭಕ್ತಿಗೀತೆಯನ್ನು ಸಾಮೂಹಿಕವಾಗಿ ಹಾಡಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಕ್ತಿ ಗೀತೆ, ಜಾನಪದ ಗೀತೆ, ಸುಗಮ ಸಂಗೀತ, ಕುಂಚ ಗಾಯನ, ನೀಲಗಾರರ ಪದ, ಸೋಬಾನೆ, ತಂಬೂರಿ ಪದ, ಚಲನಚಿತ್ರ ಗೀತೆಗಳು, ರಂಗ ಗೀತೆಗಳು, ಹೋರಾಟ ಗೀತೆಗಳು, ಹಾಸ್ಯ ಜಾನಪದ, ಭಜನೆ, ವೀರಗಾಸೆ, ಹರಿಕಥೆ, ಗೊರವರ ಕುಣಿತ, ಡೊಳ್ಳು ಕುಣಿತ, ಸ್ಯಾಕ್ರೋಪೋನ್ ವಾದನ, ತತ್ವಪದ, ಭರತನಾಟ್ಯ, ನೃತ್ಯ, ಶಿವತಾಂಡವ ನೃತ್ಯ ನಾಟಕ ಕಲಾ ಪ್ರಕಾರಗಳಿಗೆ ಸಂಬಂಽಸಿದ ಕಲಾ ಪ್ರದರ್ಶನಗಳು ಜರುಗಿದವು.
ವೇದಿಕೆಯಲ್ಲಿ ಕಲಾವಿದ ಮಂಗಲ ಶಿವಣ್ಣ, ಕನ್ನಡಪರ ಸಂಘಟನೆ ಮುಖಂಡ ಚಾ.ರಂ.ಶ್ರೀನಿವಾಸಗೌಡ, ವೇಣುಗೋಪಾಲ್, ಯುವ ಕಲಾವಿದರಾದ ಸಿದ್ದರಾಜು, ಮಂಜು ಶ್ರೀರಾಂ, ದಡದಹಳ್ಳಿ ರಮೇಶ್, ರಾಕ್‌ಗಿರೀಶ್, ಆಲೂರು ದೊರೆಸ್ವಾಮಿ ಜಾನಪದ ಕಲಾವಿದರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

3 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

1 hour ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

3 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

3 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

3 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

3 hours ago