ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೨೫೩ ಮಂದಿ ಜೀತ ವಿಮುಕ್ತರಿದ್ದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಜೀತ ವಿಮುಕ್ತರ ಪೈಕಿ ಕೆಲವರು ಮರಣ ಹೊಂದಿದ್ದಾರೆ. ಉಳಿದವರಿಗೆ ಇನ್ನೂ ಗುರುತಿನ ಚೀಟಿ, ಬಿಡುಗಡೆ ಪತ್ರ ನೀಡಿಲ್ಲ. ಜಮೀನು ನೀಡಲು ಗಡಿ ಗುರುತಿಸಬೇಕು ಎಂದರು.
ಕಳೆದ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ತುರ್ತಾಗಿ ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಭೂಮಿ ಲಭ್ಯವಿಲ್ಲದಿದ್ದರೆ ಉಪವಿಭಾಗಾಧಿಕಾರಿ ಹಂತದಲ್ಲಿ ದರ ನಿಗದಿಪಡಿಸಿ ಭೂ ಒಡೆತನದಡಿ ಜಮೀನು ಖರೀದಿಸಿ ಹಂಚಿಕೆ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:-ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ
ಜೀತವಿಮುಕ್ತರಿಗೆ ಮಂಜೂರಾಗಿರುವ ಜಮೀನುಗಳು ಬೇರೆ ವ್ಯಕ್ತಿಗಳ ಸ್ವಾಽನದಲ್ಲಿದ್ದರೆ ತೆರವುಗೊಳಿಸುವ ಪ್ರಕ್ರಿಯೆ ಶೀಘ್ರ ಆಗಬೇಕು. ಹಕ್ಕುಪತ್ರ ವಿತರಣೆ ಮಾಡಬೇಕು. ಅ.೧೩ರ ಮುಂದಿನ ಸಭೆಯೊಳಗೆ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಜೀತವಿಮುಕ್ತರಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಸಂಬಂಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಉಪವಿಭಾಗಾಽಕಾರಿ ದಿನೇಶ್ಕುಮಾರ್ ಮೀನಾ, ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅರಕಲವಾಡಿ ನಾಗೇಂದ್ರ, ರಮೇಶ್ ಪ್ರಭು, ವೃಷಭೇಂದ್ರ, ನಟರಾಜು ಮಾಳಿಗೆ, ಸಿದ್ದರಾಜು, ಕೇತಮ್ಮ, ರಜನಿ ಕೆ.ತಿವಾರಿ, ಅರ್ಪಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ಬಿಂದ್ಯಾ, ಜಿಪಂ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಮೊದಲಾದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…