ಚಾಮರಾಜನಗರ

ಚಾ.ನಗರ | ವಾರದಲ್ಲಿ ಜೀತವಿಮುಕ್ತರ ಸ್ಥಿತಿಗತಿ ವರದಿ ನೀಡಿಲು ಜಿಲ್ಲಾಧಿಕಾರಿ ತಾಕೀತು

ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ೨೫೩ ಮಂದಿ ಜೀತ ವಿಮುಕ್ತರಿದ್ದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಜೀತ ವಿಮುಕ್ತರ ಪೈಕಿ ಕೆಲವರು ಮರಣ ಹೊಂದಿದ್ದಾರೆ. ಉಳಿದವರಿಗೆ ಇನ್ನೂ ಗುರುತಿನ ಚೀಟಿ, ಬಿಡುಗಡೆ ಪತ್ರ ನೀಡಿಲ್ಲ. ಜಮೀನು ನೀಡಲು ಗಡಿ ಗುರುತಿಸಬೇಕು ಎಂದರು.

ಕಳೆದ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ತುರ್ತಾಗಿ ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಭೂಮಿ ಲಭ್ಯವಿಲ್ಲದಿದ್ದರೆ ಉಪವಿಭಾಗಾಧಿಕಾರಿ ಹಂತದಲ್ಲಿ ದರ ನಿಗದಿಪಡಿಸಿ ಭೂ ಒಡೆತನದಡಿ ಜಮೀನು ಖರೀದಿಸಿ ಹಂಚಿಕೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ:-ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ

ಜೀತವಿಮುಕ್ತರಿಗೆ ಮಂಜೂರಾಗಿರುವ ಜಮೀನುಗಳು ಬೇರೆ ವ್ಯಕ್ತಿಗಳ ಸ್ವಾಽನದಲ್ಲಿದ್ದರೆ ತೆರವುಗೊಳಿಸುವ ಪ್ರಕ್ರಿಯೆ ಶೀಘ್ರ ಆಗಬೇಕು. ಹಕ್ಕುಪತ್ರ ವಿತರಣೆ ಮಾಡಬೇಕು. ಅ.೧೩ರ ಮುಂದಿನ ಸಭೆಯೊಳಗೆ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಜೀತವಿಮುಕ್ತರಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಸಂಬಂಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಉಪವಿಭಾಗಾಽಕಾರಿ ದಿನೇಶ್‌ಕುಮಾರ್ ಮೀನಾ, ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅರಕಲವಾಡಿ ನಾಗೇಂದ್ರ, ರಮೇಶ್ ಪ್ರಭು, ವೃಷಭೇಂದ್ರ, ನಟರಾಜು ಮಾಳಿಗೆ, ಸಿದ್ದರಾಜು, ಕೇತಮ್ಮ, ರಜನಿ ಕೆ.ತಿವಾರಿ, ಅರ್ಪಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ಬಿಂದ್ಯಾ, ಜಿಪಂ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಮೊದಲಾದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

3 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

5 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

6 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

7 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

9 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago