ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ೨೫೩ ಮಂದಿ ಜೀತ ವಿಮುಕ್ತರಿದ್ದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಜೀತ ವಿಮುಕ್ತರ ಪೈಕಿ ಕೆಲವರು ಮರಣ ಹೊಂದಿದ್ದಾರೆ. ಉಳಿದವರಿಗೆ ಇನ್ನೂ ಗುರುತಿನ ಚೀಟಿ, ಬಿಡುಗಡೆ ಪತ್ರ ನೀಡಿಲ್ಲ. ಜಮೀನು ನೀಡಲು ಗಡಿ ಗುರುತಿಸಬೇಕು ಎಂದರು.
ಕಳೆದ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ತುರ್ತಾಗಿ ಕ್ರಮ ವಹಿಸುವಂತೆ ಸೂಚಿಸಲಾಗಿದ್ದು, ಭೂಮಿ ಲಭ್ಯವಿಲ್ಲದಿದ್ದರೆ ಉಪವಿಭಾಗಾಧಿಕಾರಿ ಹಂತದಲ್ಲಿ ದರ ನಿಗದಿಪಡಿಸಿ ಭೂ ಒಡೆತನದಡಿ ಜಮೀನು ಖರೀದಿಸಿ ಹಂಚಿಕೆ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:-ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ
ಜೀತವಿಮುಕ್ತರಿಗೆ ಮಂಜೂರಾಗಿರುವ ಜಮೀನುಗಳು ಬೇರೆ ವ್ಯಕ್ತಿಗಳ ಸ್ವಾಽನದಲ್ಲಿದ್ದರೆ ತೆರವುಗೊಳಿಸುವ ಪ್ರಕ್ರಿಯೆ ಶೀಘ್ರ ಆಗಬೇಕು. ಹಕ್ಕುಪತ್ರ ವಿತರಣೆ ಮಾಡಬೇಕು. ಅ.೧೩ರ ಮುಂದಿನ ಸಭೆಯೊಳಗೆ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಜೀತವಿಮುಕ್ತರಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಸಂಬಂಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಉಪವಿಭಾಗಾಽಕಾರಿ ದಿನೇಶ್ಕುಮಾರ್ ಮೀನಾ, ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅರಕಲವಾಡಿ ನಾಗೇಂದ್ರ, ರಮೇಶ್ ಪ್ರಭು, ವೃಷಭೇಂದ್ರ, ನಟರಾಜು ಮಾಳಿಗೆ, ಸಿದ್ದರಾಜು, ಕೇತಮ್ಮ, ರಜನಿ ಕೆ.ತಿವಾರಿ, ಅರ್ಪಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಪರಿಶಿಷ್ಟ ವರ್ಗಗಳ ಕಲ್ಯಾಣಾಽಕಾರಿ ಬಿಂದ್ಯಾ, ಜಿಪಂ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಮೊದಲಾದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…