ಚಾಮರಾಜನಗರ

ಚಾ.ನಗರ: ಮೇಳೈಸಿದ ರೈತ ದಸರಾ

ಚಾಮರಾಜನಗರ: ವಿವಿಧ ಜಾನಪದ ಕಲಾತಂಡಗಳು, ಅದ್ದೂರಿ ಮೆರವಣಿಗೆಗಳು, ಸ್ಥಬ್ದ ಚಿತ್ರಗಳು, ಎತ್ತಿನ ಗಾಡಿ ಮೆರವಣಿಗೆ, ಸಿರಿಧಾನ್ಯದ ಮಹತ್ವ ತಿಳಿಸಿದ ಅಧಿಕಾರಿಗಳು. ರೈತ ದಸರಾ ಯಶಸ್ಸಿಗೆ ಇವೆಲ್ಲವೂ ಸಾಕ್ಷಿಯಾದವು.

ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ದಸರಾ ಉಪಸಮಿತಿಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸ್ವತಃ ಎತ್ತಿನ ಗಾಡಿ ಚಲಿಸುವ ಮೂಲಕ ರೈತ ದಸರಾಗೆ ಚಾಲನೆ ನೀಡಿದರು.

ಆಕರ್ಷಕ ಜಾನಪದ ಕಲಾತಂಡಗಳು, ಅಲಂಕೃತ ಎತ್ತಿನ ಗಾಡಿಗಳು, ಕೃಷಿ ಸಂಬಂಧಿತ ಇಲಾಖೆಗಳ ಸ್ತಬ್ದಚಿತ್ರಗಳಿಂದ ಅದ್ದೂರಿ ಮೆರವಣಿಗೆ ನಡೆಯಿತು.

ಗಮನ ಸೆಳೆದ ಎತ್ತಿನಗಾಡಿ
ಡೊಳ್ಳು ಕುಣಿತ, ಬ್ಯಾಂಡ್ ಸೆಟ್, ವೀರಗಾಸೆ, ಗೊರವರ ಕುಣಿತ, ಹುಲಿವೇಷ, ಕಂಸಾಳೆ ಕಲಾವಿದರ ತಂಡಗಳು ಮೆರವಣಿಗೆಗೆ ಆಕರ್ಷಕ ಮೆರುಗು ನೀಡಿದವು. ಕಬ್ಬು, ಬಾಳೆ, ತಳಿರು, ತೋರಣಗಳಿಂದ ಅಲಂಕೃತಗೊಂಡಿದ್ದ ಎತ್ತಿನ ಗಾಡಿಗಳು ಮೆರವಣಿಗೆಯಲ್ಲಿ ಗಮನ ಸೆಳೆದವು. ಅಲ್ಲದೆ ಕೃಷಿ ಸಂಬಂಧಿತ ವಿವಿಧ ಇಲಾಖೆಗಳಾದ ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ ಇಲಾಖೆಗಳ ಸ್ತಬ್ದಚಿತ್ರಗಳು ಮೆರವಣಿಗೆಯ ಅಂದ ಹೆಚ್ಚಿಸಿದವು.

ಮೆರವಣಿಗೆಯು ಶ್ರೀಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ, ಜಿಲ್ಲಾಡಳಿತ ಭವನ ಸಾಗಿ ಪ್ರವಾಸಿ ಮಾರ್ಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಂತ್ಯವಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಬೀದ್, ಉಪನಿರ್ದೇಶಕರಾದ ಸುಷ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉದಯ್‌ಕುಮಾರ್, ಅಧಿಕಾರಿಗಳು, ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಇತರೆ ರೈತ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

10 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

10 hours ago