ಚಾಮರಾಜನಗರ

ಚಾ.ನಗರ | ವೈಯಕ್ತಿಕ ಸಮಸ್ಯೆಯಿಂದ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ : ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದ ಬಳಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಗರದ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ನೌಕರನಾಗಿದ್ದ ವಿನಯ್ (೩೬) ಸಾವಿಗೆ ಶರಣಾದವರು. ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನಯ್ ಶನಿವಾರ ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನಿಗೆ ಪಂಚೆ ಬಿಗಿದು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಕೋಗಿಲೂರು ಗ್ರಾಮದ ವಿನಯ್ ನಗರದಲ್ಲಿ ಕಳೆದ ೭-೮ ವರ್ಷಗಳಿಂದ ನಗರದ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ನೌಕರನಾಗಿದ್ದರು. ಉದ್ಯಾನದ ಬಳಿಯ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು.

ಶನಿವಾರ ಸ್ನೇಹಿತರು, ಸಹೋದ್ಯೋಗಿಗಳನ್ನು ಸೇರಿಸಿಕೊಂಡು ‘ಸಾರಿ’ ಎಂಬ ವಾಟ್ಸ್ಗ್ರೂಪ್ ರಚಿಸಿ ಜೀವನದಲ್ಲಿ ಬೇಸರವಾಗಿದೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದಾರೆ. ಅಂತಹ ಕೆಲಸ ಮಾಡಿಕೊಳ್ಳಬೇಡ ಎಂದು ಸ್ನೇಹಿತರು ಮನವಿ ಮಾಡಿದರೂ ನೇಣು ಹಾಕಿಕೊಂಡಿದ್ದಾರೆ.

ಮೇಸೆಜ್ ನೋಡಿದ ಸ್ನೇಹಿತರು ಮನೆಗೆ ಬಂದು ಬಾಗಿಲು ಬಡಿದರೂ ಪ್ರಯೋಜನವಾಗಲಿಲ್ಲ. ನಂತರ ಬಾಗಿಲು ಒಡೆದು ನೋಡಿದಾಗ ಫ್ಯಾನಿಗೆ ನೇಣು ಹಾಕಿಕೊಂಡಿದ್ದು ಕಂಡುಬಂದಿದೆ. ತಕ್ಷಣ ನೇಣು ಬಿಚ್ಚಿ ದೇಹವನ್ನು ಕೆಳಗೆ ಇಳಿಸಲಾಯಿತು ಅಷ್ಟೋತ್ತಿಗೆ ವಿನಯ್ ಮೃತಪಟ್ಟಿದ್ದರು. ಈ ವಿಚಾರವನ್ನು ಪಟ್ಟಣ ಪೊಲೀಸ್ ಠಾಣೆ ಪೊಲೀಸರಿಗೆ ತಿಳಿಸಲಾಯಿತು. ಸ್ಥಳಕ್ಕೆ ಇನ್ಸ್ಪೆಕ್ಟರ್ ಆನಂದ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ವಿನಯ್ ಪತ್ನಿ ಕೋಗಿಲೂರಿನಲ್ಲಿರುವ ತನ್ನ ಪತಿಯ ಊರಿಗೆ ಶುಭ ಸಮಾರಂಭವೊಂದಕ್ಕೆ ಹೋಗಿದ್ದರು. ಸದ್ಯದಲ್ಲೇ ನಗರಕ್ಕೆ ತಮ್ಮ ಮಗುವಿನೊಂದಕ್ಕೆ ಬರಲು ತಯಾರಿದ್ದರು ಆದರೆ ಪತಿ ಸಾವಿಗೆ ಶರಣಾಗಿದ್ದಾರೆ. ಭಾನುವಾರ ಬೆಳಿಗ್ಗೆ ವಿನಯ್ ಸಂಬಂಧಿಕರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಸಿಮ್ಸ್ ಆಸ್ಪತ್ರೆಗೆ ಒಪ್ಪಿಸಿದರು. ಸಂಜೆ ಶವ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ವಿತರಿಸಲಾಯಿತು.

ವಿನಯ್ ಭಾವಮೈದುನ ಉಮೇಶ್ ಇದೊಂದು ಅಸಹಜ ಸಾವು ಎಂದು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago