ಚಾಮರಾಜನಗರ : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಚಿಕ್ಕೂಸನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಆಪಾದಿಸಿದರು.
ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಮೃತ ಚಿಕ್ಕೂಸನಾಯಕ ಅವರ ಅಂತಿಮದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯತ್ ರಾಜ್ ಇಲಾಖೆ ಲೋಪದೋಷವನ್ನು ಸರಿಪಡಿಸುವುದಲ್ಲಿ ಪ್ರಿಯಾಂಕ್ ಆಸಕ್ತಿ ತೋರುತ್ತಿಲ್ಲ. ಪರಿಣಾಮವಾಗಿ ಆತ್ಮಹತ್ಯೆ ಪ್ರಕರಣಗಳು ಸಂಭವಿಸುತ್ತಿವೆ ಎಂದರು.
ಇದನ್ನು ಓದಿ: ಸಂಬಳ ನೀಡದಕ್ಕೆ ಮನನೊಂದು ವಾಟರ್ ಮ್ಯಾನ್ ಆತ್ಮಹತ್ಯೆ ; ಹೊಂಗನೂರು ಗ್ರಾಪಂ ಕಚೇರಿಯಲ್ಲಿ ಘಟನೆ
ಗ್ರಾ.ಪಂ. ನೌಕರರಿಗೆ ಸಂಬಳ ಇತರೇ ಸೌಲಭ್ಯಗಳನ್ನು ಕಲ್ಪಿಸುವ ಬದಲು ಪ್ರಿಯಾಂಕ್ ಖರ್ಗೆ ಪ್ರತಿ ದಿನ ಆರ್ಎಸ್ಎಸ್ ಜಪ ಮಾಡುತ್ತಿದ್ದು, ಇಲಾಖೆ ಕೆಲಸದ ನಿರ್ಲಕ್ಷ್ಯದ ಪರಿಣಾಮವಾಗಿ ಹೊಂಗನೂರು ಗ್ರಾ.ಪಂ. ನೌಕರ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.
ಆತ್ಮಹತ್ಯೆಯಂತಹ ಇಂತಹ ಅನೇಕ ಪ್ರಕರಣಗಳು ರಾಜ್ಯಾದ್ಯಂತ ಅಲ್ಲಲ್ಲಿ ನಡೆಯುತ್ತಲೇ ಇವೆ. ಇದಕ್ಕೆ ಸಚಿವರ ಅಸಮರ್ಥ ಆಡಳಿತ ಮೂಲ ಕಾರಣವಾಗಿದೆ. ಮೃತ ಚಿಕ್ಕೂಸನಾಯಕ ಅವರ ಕುಟುಂಬಕ್ಕೆ ಕನಿಷ್ಠ ೫೦ ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಜಯಸುಂದರ್, ಇತರರು ಹಾಜರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…