ಚಾಮರಾಜನಗರ : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಚಿಕ್ಕೂಸನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಆಪಾದಿಸಿದರು.
ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಮೃತ ಚಿಕ್ಕೂಸನಾಯಕ ಅವರ ಅಂತಿಮದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯತ್ ರಾಜ್ ಇಲಾಖೆ ಲೋಪದೋಷವನ್ನು ಸರಿಪಡಿಸುವುದಲ್ಲಿ ಪ್ರಿಯಾಂಕ್ ಆಸಕ್ತಿ ತೋರುತ್ತಿಲ್ಲ. ಪರಿಣಾಮವಾಗಿ ಆತ್ಮಹತ್ಯೆ ಪ್ರಕರಣಗಳು ಸಂಭವಿಸುತ್ತಿವೆ ಎಂದರು.
ಇದನ್ನು ಓದಿ: ಸಂಬಳ ನೀಡದಕ್ಕೆ ಮನನೊಂದು ವಾಟರ್ ಮ್ಯಾನ್ ಆತ್ಮಹತ್ಯೆ ; ಹೊಂಗನೂರು ಗ್ರಾಪಂ ಕಚೇರಿಯಲ್ಲಿ ಘಟನೆ
ಗ್ರಾ.ಪಂ. ನೌಕರರಿಗೆ ಸಂಬಳ ಇತರೇ ಸೌಲಭ್ಯಗಳನ್ನು ಕಲ್ಪಿಸುವ ಬದಲು ಪ್ರಿಯಾಂಕ್ ಖರ್ಗೆ ಪ್ರತಿ ದಿನ ಆರ್ಎಸ್ಎಸ್ ಜಪ ಮಾಡುತ್ತಿದ್ದು, ಇಲಾಖೆ ಕೆಲಸದ ನಿರ್ಲಕ್ಷ್ಯದ ಪರಿಣಾಮವಾಗಿ ಹೊಂಗನೂರು ಗ್ರಾ.ಪಂ. ನೌಕರ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.
ಆತ್ಮಹತ್ಯೆಯಂತಹ ಇಂತಹ ಅನೇಕ ಪ್ರಕರಣಗಳು ರಾಜ್ಯಾದ್ಯಂತ ಅಲ್ಲಲ್ಲಿ ನಡೆಯುತ್ತಲೇ ಇವೆ. ಇದಕ್ಕೆ ಸಚಿವರ ಅಸಮರ್ಥ ಆಡಳಿತ ಮೂಲ ಕಾರಣವಾಗಿದೆ. ಮೃತ ಚಿಕ್ಕೂಸನಾಯಕ ಅವರ ಕುಟುಂಬಕ್ಕೆ ಕನಿಷ್ಠ ೫೦ ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಜಯಸುಂದರ್, ಇತರರು ಹಾಜರಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…