ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಕೊತ್ತಲವಾಡಿಯಲ್ಲಿ ಗ್ರೇಡ್-೧ ಕಾರ್ಯದರ್ಶಿ ಆಗಿರುವ ಎಲ್. ರಾಜೇಂದ್ರ ಪ್ರಸಾದ್ ಅವರನ್ನು ಅಮಾನತುಗೊಳಿಸಲಾಗಿದೆ.
೧-೪-೨೦೨೨ ರಿಂದ ೨೫-೫-೨೩ರವರೆಗೆ, ೫-೩-೨೪ ರಿಂದ ೩೧-೩-೨೪ರ ಅವಧಿಯಲ್ಲಿನ ಲೆಕ್ಕ ಪರಿಶೋಧನೆಯಲ್ಲಿ ಕಂಡುಬಂದಿರುವ ಲೋಪಗಳ ಹಿನ್ನೆಲೆಯಲ್ಲಿ ಮಹೇಶ್ ಅವರನ್ನು ಅಮಾನತುಗೊಳಿಸಲಾಗಿದೆ. ಇದೇ ರೀತಿ ರಾಜೇಂದ್ರ ಪ್ರಸಾದ್ ಅವರು ಸದರಿ ಪಂಚಾಯಿತಿಯಲ್ಲಿ ೨೬-೫-೨೩ ರಿಂದ ೪-೩-೨೪ರವರೆಗೆ ಪ್ರಭಾರ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿನ ಲೆಕ್ಕ ಪರಿಶೋಧನಾ ಸಂದರ್ಭದಲ್ಲಿ ಕಂಡು ಬಂದಿರುವ ಲೋಪಗಳ ಮೇರೆಗೆ ಅವರನ್ನು ಸಹ ಅಮಾನತುಗೊಳಿಸಲಾಗಿದೆ ಎಂದು ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಮ್ಮ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…